12:49 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡದಲ್ಲಿ ನಿಸ್ಸಂಶಯವಾಗಿ ಕಾಂಗ್ರೆಸ್ ಜಯಭೇರಿ: ಕೊಕ್ಕಡ ಪ್ರಚಾರ ಸಭೆಯಲ್ಲಿ ಪದ್ಮರಾಜ್ ಆರ್. ಪೂಜಾರಿ ವಿಶ್ವಾಸ

18/04/2024, 21:15

ಕೊಕ್ಕಡ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಕೊಕ್ಕಡದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಯಭೇರಿ ಬಾರಿಸಲಿದೆ‌. ಇದರಲ್ಲಿ ಯಾವುದೇ ಸಂಶಯ ಬೇಡ. ಇದುವರೆಗೆ ಆರ್ಥಿಕವಾಗಿ ಹಿಂದುಳಿದವರ ಏಳಿಗೆಗಾಗಿ ಶ್ರಮಿಸಿದ್ದೇನೆ. ಇನ್ನು ಮುಂದೆಯೂ ಬಡವರ ಏಳಿಗೆಗಾಗಿ ದುಡಿಯುತ್ತೇನೆ. ಕಾಂಗ್ರೆಸ್ ಸರಕಾರ ನೀಡಿರುವ ಗ್ಯಾರೆಂಟಿ ಯೋಜನೆಗಳಿಂದ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗಿದೆ ಎಂದ ಅವರು, ವಸಂತ್ ಬಂಗೇರರ ಚಿಂತನೆ, ಆದರ್ಶಗಳನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ ಎಂದರು.
ಮಾಜಿ ಸಚಿವ ಗಂಗಾಧರ ಗೌಡ ಮಾತನಾಡಿ, ನಿಷ್ಕಲಂಕ ವ್ಯಕ್ತಿತ್ವದ ಪದ್ಮರಾಜ್ ಆರ್. ಪೂಜಾರಿ ಅವರು ಈ ಮಣ್ಣಿನಲ್ಲೇ ಹುಟ್ಟಿ, ಬೆಳೆದವರು. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೇ, ಅವರ ಗೆಲುವಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸಿಪಿಎಂ ಪಕ್ಷದ ನೇತಾರ ಬಿ.ಎಂ. ಭಟ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್, ಡಿಸಿಸಿ ಪ್ರ. ಕಾರ್ಯದರ್ಶಿ ರಂಜನ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ನಾಗೇಶ್ ಗೌಡ, ಜಿಪಂ ಮಾಜಿ ಸದಸ್ಯೆ ನಮಿತಾ ಕೆ. ಪೂಜಾರಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ್ ಗಬ್ಬಲಡ್ಕ, ಪ್ರಚಾರ ಸಮಿತಿ ಅಧ್ಯಕ್ಷ ಧರ್ಣೇಂದ್ರ ಕುಮಾರ್, ವಂದನಾ ಭಂಡಾರಿ, ಶೇಖರ್ ಬೆಳಾಲ್, ಗಣೇಶ್ ಗಬ್ಬಲಡ್ಕ, ಬಾಲಕೃಷ್ಣ ಗೌಡ ಕೇರಿಮಾರು, ಸುಂದರ ಗೌಡ, ರಾಜಶೇಖರ್ ಅಜ್ರಿ, ಹಕೀಂ, ದಯಾನಂದ ಪೂಜಾರಿ, ಕಲಂದರ್ ಕೊಕ್ಕಡ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು