5:00 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕಟೀಲು ದೇಗುಲ ಜಾತ್ರಾ ಮಹೋತ್ಸವ: ಏ.19, 20ರಂದು ರಸ್ತೆ ಸಂಚಾರದಲ್ಲಿ ಬದಲಾವಣೆ

18/04/2024, 21:19

ಮಂಗಳೂರು(reporterkarnataka.com): ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಏ.19 ಶುಕ್ರವಾರದಿಂದ 20 ಶನಿವಾರದ ವರೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಕಟೀಲು ಪರಿಸರದಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಾರ್ಪಡು ಮಾಡಲಾಗಿದೆ.
ಕಟಿಲು ಮುಖ್ಯ ರಸ್ತೆ (ರಥ ಬಿದಿ) ಯಲ್ಲಿ ಮಲ್ಲಿಗೆ ಅಂಗಡಿ ಕ್ರಾಸ್‍ನಿಂದ ದುರ್ಗಾ ಸಂಜೀವಿನಿ ಆಸ್ಪತ್ರೆ ಜಂಕ್ಷನ್ (ಕಲ್ಲಕುಮೇರು ಕ್ರಾಸ್) ವರೆಗೆ ವಾಹನ ಸಂಚಾರ ನಿಲುಗಡೆ ನಿಷೇಧಿಸಿದೆ. ಮಂಗಳೂರಿನಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆ ಅಂಗಡಿ ಕ್ರಾಸ್ ಬಳಿ ಎಡಕ್ಕೆ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಪಾರ್ಕಿಂಗ್ ಸ್ಥಳಗಳಿಗೆ ಚಲಿಸುವುದು. ಕಟೀಲಿನಿಂದ ಮಂಗಳೂರಿಗೆ ಬರುವ ವಾಹನಗಳು ಕಟೀಲು ಪದವಿ ಪೂರ್ವ ಕಾಲೇಜು ಮೈದಾನದ ಪಕ್ಕದ ರಸ್ತೆಯ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ-ಮಂಗಳೂರು ಕಡೆಗೆ ಸಂಚರಿಸುವುದು. ಸರ್ವಿಸ್ ಬಸ್ಸು, ಟೂರಿಸ್ಟ್ ಬಸ್ಸು, ಕಾರು ಹಾಗೂ ಇತರೆ ವಾಹನಗಳಿಗೆ ಬಸ್ ಸ್ಟ್ಯಾಂಡ್ ಹಿಂದುಗಡೆ ಇರುವ ಸಿತ್ಲಾ ಮೈದಾನ ಹಾಗೂ ಕಟೀಲು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ಹಾಗೂ ಅಪರ ದಂಡಾಧಿಕಾರಿಗಳು ಆಗಿರುವ ಅನುಪಮ್ ಅಗ್ರವಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು