9:44 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಕಟೀಲು ದೇಗುಲ ಜಾತ್ರಾ ಮಹೋತ್ಸವ: ಏ.19, 20ರಂದು ರಸ್ತೆ ಸಂಚಾರದಲ್ಲಿ ಬದಲಾವಣೆ

18/04/2024, 21:19

ಮಂಗಳೂರು(reporterkarnataka.com): ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಏ.19 ಶುಕ್ರವಾರದಿಂದ 20 ಶನಿವಾರದ ವರೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಕಟೀಲು ಪರಿಸರದಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಾರ್ಪಡು ಮಾಡಲಾಗಿದೆ.
ಕಟಿಲು ಮುಖ್ಯ ರಸ್ತೆ (ರಥ ಬಿದಿ) ಯಲ್ಲಿ ಮಲ್ಲಿಗೆ ಅಂಗಡಿ ಕ್ರಾಸ್‍ನಿಂದ ದುರ್ಗಾ ಸಂಜೀವಿನಿ ಆಸ್ಪತ್ರೆ ಜಂಕ್ಷನ್ (ಕಲ್ಲಕುಮೇರು ಕ್ರಾಸ್) ವರೆಗೆ ವಾಹನ ಸಂಚಾರ ನಿಲುಗಡೆ ನಿಷೇಧಿಸಿದೆ. ಮಂಗಳೂರಿನಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆ ಅಂಗಡಿ ಕ್ರಾಸ್ ಬಳಿ ಎಡಕ್ಕೆ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಪಾರ್ಕಿಂಗ್ ಸ್ಥಳಗಳಿಗೆ ಚಲಿಸುವುದು. ಕಟೀಲಿನಿಂದ ಮಂಗಳೂರಿಗೆ ಬರುವ ವಾಹನಗಳು ಕಟೀಲು ಪದವಿ ಪೂರ್ವ ಕಾಲೇಜು ಮೈದಾನದ ಪಕ್ಕದ ರಸ್ತೆಯ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ-ಮಂಗಳೂರು ಕಡೆಗೆ ಸಂಚರಿಸುವುದು. ಸರ್ವಿಸ್ ಬಸ್ಸು, ಟೂರಿಸ್ಟ್ ಬಸ್ಸು, ಕಾರು ಹಾಗೂ ಇತರೆ ವಾಹನಗಳಿಗೆ ಬಸ್ ಸ್ಟ್ಯಾಂಡ್ ಹಿಂದುಗಡೆ ಇರುವ ಸಿತ್ಲಾ ಮೈದಾನ ಹಾಗೂ ಕಟೀಲು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ಹಾಗೂ ಅಪರ ದಂಡಾಧಿಕಾರಿಗಳು ಆಗಿರುವ ಅನುಪಮ್ ಅಗ್ರವಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು