3:38 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಕಟೀಲು ದೇಗುಲ ಜಾತ್ರಾ ಮಹೋತ್ಸವ: ಏ.19, 20ರಂದು ರಸ್ತೆ ಸಂಚಾರದಲ್ಲಿ ಬದಲಾವಣೆ

18/04/2024, 21:19

ಮಂಗಳೂರು(reporterkarnataka.com): ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಏ.19 ಶುಕ್ರವಾರದಿಂದ 20 ಶನಿವಾರದ ವರೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಕಟೀಲು ಪರಿಸರದಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಾರ್ಪಡು ಮಾಡಲಾಗಿದೆ.
ಕಟಿಲು ಮುಖ್ಯ ರಸ್ತೆ (ರಥ ಬಿದಿ) ಯಲ್ಲಿ ಮಲ್ಲಿಗೆ ಅಂಗಡಿ ಕ್ರಾಸ್‍ನಿಂದ ದುರ್ಗಾ ಸಂಜೀವಿನಿ ಆಸ್ಪತ್ರೆ ಜಂಕ್ಷನ್ (ಕಲ್ಲಕುಮೇರು ಕ್ರಾಸ್) ವರೆಗೆ ವಾಹನ ಸಂಚಾರ ನಿಲುಗಡೆ ನಿಷೇಧಿಸಿದೆ. ಮಂಗಳೂರಿನಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆ ಅಂಗಡಿ ಕ್ರಾಸ್ ಬಳಿ ಎಡಕ್ಕೆ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಪಾರ್ಕಿಂಗ್ ಸ್ಥಳಗಳಿಗೆ ಚಲಿಸುವುದು. ಕಟೀಲಿನಿಂದ ಮಂಗಳೂರಿಗೆ ಬರುವ ವಾಹನಗಳು ಕಟೀಲು ಪದವಿ ಪೂರ್ವ ಕಾಲೇಜು ಮೈದಾನದ ಪಕ್ಕದ ರಸ್ತೆಯ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ-ಮಂಗಳೂರು ಕಡೆಗೆ ಸಂಚರಿಸುವುದು. ಸರ್ವಿಸ್ ಬಸ್ಸು, ಟೂರಿಸ್ಟ್ ಬಸ್ಸು, ಕಾರು ಹಾಗೂ ಇತರೆ ವಾಹನಗಳಿಗೆ ಬಸ್ ಸ್ಟ್ಯಾಂಡ್ ಹಿಂದುಗಡೆ ಇರುವ ಸಿತ್ಲಾ ಮೈದಾನ ಹಾಗೂ ಕಟೀಲು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ಹಾಗೂ ಅಪರ ದಂಡಾಧಿಕಾರಿಗಳು ಆಗಿರುವ ಅನುಪಮ್ ಅಗ್ರವಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು