2:43 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ದೂರ ಶಿಕ್ಷಣದ ಮೂಲಕ ಸಹಕಾರ ಉನ್ನತ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನ:: ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದಿಂದ ಎಚ್ ಡಿಸಿಎಂ ಕೋರ್ಸ್

19/04/2024, 19:23

ಮಂಗಳೂರು(reporterkarnataka.com):ಸಹಕಾರ ಕಾಯ್ದೆ ಮತ್ತು ನಿಯಮಗಳಲ್ಲಿ ಸಹಕಾರ ಸಂಘಗಳ ಹಾಗೂ ಸಹಕಾರಿ ಬ್ಯಾಂಕ್‌ಗಳ ನೇಮಕಾತಿ ಮತ್ತು ಒಬ್ಬ ನೌಕರನ ಯಾವುದೇ ಉನ್ನತ ಹುದ್ದೆಗೆ ಪದೋನ್ನತಿ ನೀಡುವಾಗ ಅರ್ಹತೆಯಲ್ಲಿ ಹಾಗೂ ನಗರ ಸಹಕಾರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಪೂರ್ಣಾವಧಿ ನಿರ್ದೇಶಕರ ಹುದ್ದೆಯ ಆಯ್ಕೆ ಸಂದರ್ಭದಲ್ಲೂ ಉನ್ನತ ಶಿಕ್ಷಣ ಅರ್ಹತೆ ನಿಗದಿ ಪಡಿಸಿ ಬ್ಯಾಂಕಿಂಗ್ ಶಿಕ್ಷಣ ಕಡ್ಡಾಯವೆಂದು ಕರ್ನಾಟಕ ರಾಜ್ಯ ಸರಕಾರದ ಸಹಕಾರ ಕಾಯ್ದೆಯು ಮಹತ್ವದ ಆದೇಶ ಹೊರಡಿಸಿರುವುದರಿಂದ ಮುಂದಿನ ದಿನಗಳಲ್ಲಿ ಹೈಯರ್ ಡಿಪ್ಲೊಮಾ ಇನ್ ಕೋ-ಒಪರೇಟಿವ್ ಮ್ಯಾನೆಜ್‌ಮೆಂಟ್ (ಎಚ್.ಡಿ.ಸಿ.ಎಂ) ಶಿಕ್ಷಣದ ಅಗತ್ಯವಿರುತ್ತದೆ.
ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘವು ಈ ಕೋರ್ಸ್ ಗಳನ್ನು ನಡೆಸುತ್ತಾ ಬಂದಿದ್ದು ಜಿಲ್ಲೆಯ ಸಹಕಾರ ಸಂಘಗಳ ಹಿರಿಯ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿಗಳಿಗೆ ದೂರ ಶಿಕ್ಷಣ ಮಾದರಿಯಲ್ಲಿ ಮಂಗಳೂರು ಕೇಂದ್ರಿಕೃತವಾಗಿ ತರಗತಿಗಳು, ಮೌಖಿಕ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಗಳು ನಡೆಯಲಿದ್ದು ಮುಂದಿನ ದಿನಗಳಲ್ಲಿ ಸಹಕಾರ ಬ್ಯಾಂಕ್/ಸಂಘಗಳಲ್ಲಿ ಉದ್ಯೋಗವಕಾಶಕ್ಕೆ ಉನ್ನತ ಡಿಪ್ಲೊಮಾ ಶಿಕ್ಷಣವನ್ನು ಪಡೆಯಲು ಅನುಕೂಲಕರವಾಗಲಿದೆ. ಅಲ್ಲದೇ ತರಗತಿಗಳು ಮತ್ತು ಎಲ್ಲಾ ಪರೀಕ್ಷೆಗಳು ರಜಾದಿನಗಳಂದು ನಡೆಯಲಿರುವುದರಿಂದ ಸಹಕಾರ ಸಂಘಗಳ ಸಿಬ್ಬಂದಿಗಳಿಗೆ ಅಷ್ಟೇ ಅಲ್ಲದೇ ಪದವಿ ಪೂರೈಸಿರುವ ಸಹಕಾರಿ ಸಂಘದ ಉದ್ಯೋಗ ಆಕಾಂಕ್ಷಿಗಳಿಗೂ ಈ ಶಿಕ್ಷಣ ಪೂರಕವಾಗಲಿದೆ. ಆರು ತಿಂಗಳ ಅವಧಿಯ ಕೋರ್ಸಿನಲ್ಲಿ 13 ವಿಷಯ ಹೊಂದಿದ್ದು ಎರಡು ಸೆಮಿಸ್ಟರ್‌ನಲ್ಲಿ ತರಬೇತಿ ನಡೆಯಲಿದೆ.
ಪ್ರಾದೇಶಿಕ ಸಹಕಾರ ನಿರ್ವಹಣಾ ಕೇಂದ್ರ ಬೆಂಗಳೂರು, ಇವರು ನೀಡುತ್ತಿರುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೊಮಾ ದೂರ ಶಿಕ್ಷಣ ಕೋರ್ಸ್ ಮಂಗಳೂರು ಕೇಂದ್ರಿತವಾಗಿ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ (ನಿ.) ಪಡೀಲ್, ಮಂಗಳೂರು ಇವರ ಸಹಭಾಗಿತ್ವದಲ್ಲಿ ಈಗಾಗಲೇ 7 ಬ್ಯಾಚ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಮುಂದಿನ ಬ್ಯಾಚ್‌ಗೆ ನೋಂದಣಿ ಪ್ರಕ್ರಿಯೆಯು ಆರಂಭವಾಗಿದ್ದು, ಆಸಕ್ತ ಸಹಕಾರ ಸಂಘಗಳ ಸಿಬ್ಬಂದಿಗಳು ಹಾಗೂ ಪದವೀದರರು ಕೋರ್ಸಿನ ವಿವರಗಳನ್ನು ಮತ್ತು ಅರ್ಜಿಯನ್ನು ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಹತ್ತಿರದ ಶಾಖೆಯಲ್ಲಿ ಪಡೆದು ಭರ್ತಿ ಮಾಡಿ ನಿಗದಿತ ಶುಲ್ಕದೊಂದಿಗೆ ದಿನಾಂಕ
30.05.2024ರ ಒಳಗೆ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ (ನಿ.) ಆತ್ಮಶಕ್ತಿ ಸೌಧ, ಬೈರಾಡಿಕೆರೆಯ ಹತ್ತಿರ, ಪಡೀಲ್, ಮಂಗಳೂರು-07 ಅಥವಾ ಸಂಘದ ಹತ್ತಿರದ ಶಾಖೆಗೆ ತಲುಪುವಂತೆ ಕಳುಹಿಸಿಕೊಡಲು ವಿನಂತಿಸಲಾಗಿದೆ. ಮೊದಲು ನೋಂದಣಿ ಮಾಡುವ 100 ಮಂದಿ ಕೋರ್ಸ್ ಆಕಾಂಕ್ಷಿಗಳಿಗೆ ಅವಕಾಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ :
0824-2003355, 2008855, 2007755, 8151057555, 8150063555ಕ್ಕೆ ಸಂಪರ್ಕಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು