7:52 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸಾಲದ ಶೂಲಕ್ಕೆ ಬಲಿಯಾದ ಕಾಲೇಜು ಉಪನ್ಯಾಸಕ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣು?

19/04/2024, 19:29

*ಬೆಳ್ಳಂ ಬೆಳಿಗ್ಗೆ ನಿರ್ಜನ ಪ್ರದೇಶದಲ್ಲಿ ಸಾವಿಗೆ ಶರಣಾಗಿರುವ ಉಪನ್ಯಾಸಕನ ಸಾವಿನ ಸುತ್ತ ಅನುಮಾನದ ಹುತ್ತ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸಾವಿರಾರು ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡಿ ದಾರಿ ದೀಪವಾಗ ಬೇಕಿದ್ದ ಕಾಲೇಜು ಉಪನ್ಯಾಸಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಹದೇವಪ್ಪ ಎಂಬುವರರ ಪುತ್ರ ಮಾದಪ್ಪ (45) ಮೃತ ಉಪನ್ಯಾಸಕ ಎಂದು ತಿಳಿದು ಬಂದಿದೆ.
ನಂಜನಗೂಡು ಪಟ್ಟಣದ ವಿ.ಎ. ಲೇ‌ ಔಟ್ ನಲ್ಲಿ ಸ್ವಂತ ಮನೆ ಹೊಂದಿದ್ದು ವಾಸವಾಗಿದ್ದರು. ಕಳೆದ ಎರಡು ವರ್ಷಗಳ ಹಿಂದೆ ನೂತನ ಮನೆ ಗೃಹಪ್ರವೇಶವು ಕೂಡ ನಡೆದಿತ್ತು.
ಚಾಮರಾಜನಗರ ಜಿಲ್ಲಾ ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಕಷ್ಟು ವರ್ಷಗಳಿಂದಲೂ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.


ಮೃತ ಉಪನ್ಯಾಸಕ ಮಾದಪ್ಪ ಎಂಬುವವರ ಪತ್ನಿ ಪೂರ್ಣಿಮಾ ಎಂಬುವರು ಕೂಡ ಜೆಎಸ್ಎಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದು,ಪತಿ ಪತ್ನಿ ಅನ್ನೋನ್ಯವಾಗಿ ಜೀವನ ಸಾಗಿಸುತ್ತಿದ್ದರು. ಇವರಿಬ್ಬರಿಗೆ 16 ವರ್ಷದ ಪುತ್ರಿಯೂ ಕೂಡ ಇದ್ದಾಳೆ ಎಂಬ ಮಾಹಿತಿ ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ರಘು, ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣವನ್ನು ದಾಖಲು ಮಾಡಿಕೊಂಡು ಶವವನ್ನು ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಈಗಾಗಲೇ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿರುವ ಉಪನ್ಯಾಸಕನ ಸಾವಿನ ಸುತ್ತ ಹಲವು ಅನುಮಾನದ ಹುತ್ತ ಬೆಳೆದು ನಿಂತಿದೆ.
ಪೊಲೀಸರ ತನಿಖೆ ಬಳಿಕ ಸ್ಪಷ್ಟ ಮಾಹಿತಿ ತಿಳಿದು ಬರಲಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು