1:57 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಜೆಪ್ಪು ಮಾರ್ಕೆಟ್ -ಬೋಳಾರ ಮಾರಿಗುಡಿ ರಸ್ತೆಯಲ್ಲೇ ವಾಹನಗಳ ಪಾರ್ಕಿಂಗ್: ಪಾದಚಾರಿಗಳ ಗೋಳು ಕೇಳುವವರಿಲ್ಲ: ಸ್ಥಳೀಯ ಕಾರ್ಪೋರೇಟರ್ ಏನು ಮಾಡುತ್ತಿದ್ದಾರೆ?

20/04/2024, 15:58

ಮಂಗಳೂರು(reporterkarnataka.com): ನಗರದ ಯಾವುದೇ ಮೂಲೆಗೆ ಹೋಗಿ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುವುದು ಸಾಮಾನ್ಯವಾಗಿ ಹೋಗಿದೆ. ಯಾರಿಗೆ ಏನೇ ತೊಂದರೆಯಾಗಲಿ, ತನ್ನ ವಾಹನ ಪಾರ್ಕಿಂಗ್ ಆದ್ರೆ ಸಾಕು ಎನ್ನುವ ಮನಸ್ಥಿತಿಯೇ ಇದಕ್ಕೆ ಕಾರಣ. ಇಂತಹ ಸಮಸ್ಯೆ ಜೆಪ್ಪು ಮಾರ್ಕೆಟ್- ಬೋಳಾರ ಮಾರಿಗುಡಿ ರಸ್ತೆಯಲ್ಲೂ ಜೀವಂತವಾಗಿದೆ.
ಜೆಪ್ಪು ಮಾರ್ಕೆಟ್ ನಿಂದ ಇತಿಹಾಸ ಪ್ರಸಿದ್ಧ ಬೋಳಾರ ಮಾರಿಗುಡಿ ದೇವಸ್ಥಾನದ ರಥ ಬೀದಿ ರಸ್ತೆ ವರೆಗೆ ವಾಹನಗಳನ್ನು ರಸ್ತೆಯಲ್ಲಿ ಮತ್ತು ಪಾದಚಾರಿಗಳು ನಡೆದಾಡುವ ಜಾಗದಲ್ಲಿ ಪಾರ್ಕಿಂಗ್ ಮಾಡುವುದು ಮಾಮೂಲಿಯಾಗಿದೆ. ಇದರಿಂದ ಪಾದಚಾರಿಗಳು
ಸಂಕಷ್ಟ ಎದುರಿಸುವಂತಾಗಿದೆ.
ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಮಂಗಳಾದೇವಿ ಮತ್ತು ಶ್ರೀ ಕ್ಷೇತ್ರ ಬೋಳಾರ ಮಾರಿಗುಡಿ ತೆರಳುವ ಬಸ್ಸುಗಳು ಸಂಚರಿಸುವ ಈ ರಸ್ತೆಯು ಜನನಿಬಿಡ ಪ್ರದೇಶವಾಗಿದೆ. ಎಳೆಯ ಮಕ್ಕಳು, ವಯೋ ವೃದ್ಧರು ಈ ಭಾಗದಲ್ಲಿ ತೆರಳುವುದು ಕಷ್ಟಕರವಾಗಿದೆ. ಘನ ವಾಹನಗಳು ಸಂಚರಿಸುವಾಗ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವ ದ್ವಿಚಕ್ರ ವಾಹನಗಳಿಂದ ಪಾದಚಾರಿಗಳಿಗೆ ನಡೆದಾಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಜೆಪ್ಪು ಮಾರ್ಕೆಟ್,ಮಹಾಲಸಾ ಕಂಪ್ಯೂಟರ್ ಕೇಂದ್ರ, ಪ್ರಧಾನ ಮಂತ್ರಿ ಜನೌಷಧಿ,ಬ್ಯಾಂಕುಗಳಿಗೆ ನಿತ್ಯ ದೈನಂದಿನ ತಮ್ಮ ವ್ಯವಹಾರಗಳಿಗೆ ತೆರಳುವವರಿಗೆ ಈ ಭಾಗದಲ್ಲಿ ನಡೆದಾಡುವುದು ದುಸ್ತರ ಎನಿಸಿದೆ.
ಆಯಾಯ ಕಟ್ಟಡಗಳಲ್ಲಿ ಪಾರ್ಕಿಂಗ್ ಮಾಡದೇ ಜನರು ನಡೆದಾಡುವ ಜಾಗದಲ್ಲಿ ಮತ್ತು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವವರಿಗೆ ಸಂಬಂಧ ಪಟ್ಟವರು ದಂಡ ವಿಧಿಸುವ ಅಗತ್ಯತೆ ಇದೆ. ಪ್ರಮುಖವಾಗಿ ಈ ಪ್ರದೇಶದ ಸ್ಥಳೀಯ ಜನಪ್ರತಿನಿಧಿಗಳು ಪಾದಚಾರಿಗಳಿಗೆ ನಡೆದಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಿ ಪಾದಚಾರಿಗಳಿಗೆ ಪ್ರಾಣಕ್ಕೆ ಸಂಕಷ್ಟ ಎದುರಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು