12:51 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ…

ಇತ್ತೀಚಿನ ಸುದ್ದಿ

ಜೆಪ್ಪು ಮಾರ್ಕೆಟ್ -ಬೋಳಾರ ಮಾರಿಗುಡಿ ರಸ್ತೆಯಲ್ಲೇ ವಾಹನಗಳ ಪಾರ್ಕಿಂಗ್: ಪಾದಚಾರಿಗಳ ಗೋಳು ಕೇಳುವವರಿಲ್ಲ: ಸ್ಥಳೀಯ ಕಾರ್ಪೋರೇಟರ್ ಏನು ಮಾಡುತ್ತಿದ್ದಾರೆ?

20/04/2024, 15:58

ಮಂಗಳೂರು(reporterkarnataka.com): ನಗರದ ಯಾವುದೇ ಮೂಲೆಗೆ ಹೋಗಿ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುವುದು ಸಾಮಾನ್ಯವಾಗಿ ಹೋಗಿದೆ. ಯಾರಿಗೆ ಏನೇ ತೊಂದರೆಯಾಗಲಿ, ತನ್ನ ವಾಹನ ಪಾರ್ಕಿಂಗ್ ಆದ್ರೆ ಸಾಕು ಎನ್ನುವ ಮನಸ್ಥಿತಿಯೇ ಇದಕ್ಕೆ ಕಾರಣ. ಇಂತಹ ಸಮಸ್ಯೆ ಜೆಪ್ಪು ಮಾರ್ಕೆಟ್- ಬೋಳಾರ ಮಾರಿಗುಡಿ ರಸ್ತೆಯಲ್ಲೂ ಜೀವಂತವಾಗಿದೆ.
ಜೆಪ್ಪು ಮಾರ್ಕೆಟ್ ನಿಂದ ಇತಿಹಾಸ ಪ್ರಸಿದ್ಧ ಬೋಳಾರ ಮಾರಿಗುಡಿ ದೇವಸ್ಥಾನದ ರಥ ಬೀದಿ ರಸ್ತೆ ವರೆಗೆ ವಾಹನಗಳನ್ನು ರಸ್ತೆಯಲ್ಲಿ ಮತ್ತು ಪಾದಚಾರಿಗಳು ನಡೆದಾಡುವ ಜಾಗದಲ್ಲಿ ಪಾರ್ಕಿಂಗ್ ಮಾಡುವುದು ಮಾಮೂಲಿಯಾಗಿದೆ. ಇದರಿಂದ ಪಾದಚಾರಿಗಳು
ಸಂಕಷ್ಟ ಎದುರಿಸುವಂತಾಗಿದೆ.
ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಮಂಗಳಾದೇವಿ ಮತ್ತು ಶ್ರೀ ಕ್ಷೇತ್ರ ಬೋಳಾರ ಮಾರಿಗುಡಿ ತೆರಳುವ ಬಸ್ಸುಗಳು ಸಂಚರಿಸುವ ಈ ರಸ್ತೆಯು ಜನನಿಬಿಡ ಪ್ರದೇಶವಾಗಿದೆ. ಎಳೆಯ ಮಕ್ಕಳು, ವಯೋ ವೃದ್ಧರು ಈ ಭಾಗದಲ್ಲಿ ತೆರಳುವುದು ಕಷ್ಟಕರವಾಗಿದೆ. ಘನ ವಾಹನಗಳು ಸಂಚರಿಸುವಾಗ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವ ದ್ವಿಚಕ್ರ ವಾಹನಗಳಿಂದ ಪಾದಚಾರಿಗಳಿಗೆ ನಡೆದಾಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಜೆಪ್ಪು ಮಾರ್ಕೆಟ್,ಮಹಾಲಸಾ ಕಂಪ್ಯೂಟರ್ ಕೇಂದ್ರ, ಪ್ರಧಾನ ಮಂತ್ರಿ ಜನೌಷಧಿ,ಬ್ಯಾಂಕುಗಳಿಗೆ ನಿತ್ಯ ದೈನಂದಿನ ತಮ್ಮ ವ್ಯವಹಾರಗಳಿಗೆ ತೆರಳುವವರಿಗೆ ಈ ಭಾಗದಲ್ಲಿ ನಡೆದಾಡುವುದು ದುಸ್ತರ ಎನಿಸಿದೆ.
ಆಯಾಯ ಕಟ್ಟಡಗಳಲ್ಲಿ ಪಾರ್ಕಿಂಗ್ ಮಾಡದೇ ಜನರು ನಡೆದಾಡುವ ಜಾಗದಲ್ಲಿ ಮತ್ತು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವವರಿಗೆ ಸಂಬಂಧ ಪಟ್ಟವರು ದಂಡ ವಿಧಿಸುವ ಅಗತ್ಯತೆ ಇದೆ. ಪ್ರಮುಖವಾಗಿ ಈ ಪ್ರದೇಶದ ಸ್ಥಳೀಯ ಜನಪ್ರತಿನಿಧಿಗಳು ಪಾದಚಾರಿಗಳಿಗೆ ನಡೆದಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಿ ಪಾದಚಾರಿಗಳಿಗೆ ಪ್ರಾಣಕ್ಕೆ ಸಂಕಷ್ಟ ಎದುರಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು