1:10 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಜೆಪ್ಪು ಮಾರ್ಕೆಟ್ -ಬೋಳಾರ ಮಾರಿಗುಡಿ ರಸ್ತೆಯಲ್ಲೇ ವಾಹನಗಳ ಪಾರ್ಕಿಂಗ್: ಪಾದಚಾರಿಗಳ ಗೋಳು ಕೇಳುವವರಿಲ್ಲ: ಸ್ಥಳೀಯ ಕಾರ್ಪೋರೇಟರ್ ಏನು ಮಾಡುತ್ತಿದ್ದಾರೆ?

20/04/2024, 15:58

ಮಂಗಳೂರು(reporterkarnataka.com): ನಗರದ ಯಾವುದೇ ಮೂಲೆಗೆ ಹೋಗಿ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುವುದು ಸಾಮಾನ್ಯವಾಗಿ ಹೋಗಿದೆ. ಯಾರಿಗೆ ಏನೇ ತೊಂದರೆಯಾಗಲಿ, ತನ್ನ ವಾಹನ ಪಾರ್ಕಿಂಗ್ ಆದ್ರೆ ಸಾಕು ಎನ್ನುವ ಮನಸ್ಥಿತಿಯೇ ಇದಕ್ಕೆ ಕಾರಣ. ಇಂತಹ ಸಮಸ್ಯೆ ಜೆಪ್ಪು ಮಾರ್ಕೆಟ್- ಬೋಳಾರ ಮಾರಿಗುಡಿ ರಸ್ತೆಯಲ್ಲೂ ಜೀವಂತವಾಗಿದೆ.
ಜೆಪ್ಪು ಮಾರ್ಕೆಟ್ ನಿಂದ ಇತಿಹಾಸ ಪ್ರಸಿದ್ಧ ಬೋಳಾರ ಮಾರಿಗುಡಿ ದೇವಸ್ಥಾನದ ರಥ ಬೀದಿ ರಸ್ತೆ ವರೆಗೆ ವಾಹನಗಳನ್ನು ರಸ್ತೆಯಲ್ಲಿ ಮತ್ತು ಪಾದಚಾರಿಗಳು ನಡೆದಾಡುವ ಜಾಗದಲ್ಲಿ ಪಾರ್ಕಿಂಗ್ ಮಾಡುವುದು ಮಾಮೂಲಿಯಾಗಿದೆ. ಇದರಿಂದ ಪಾದಚಾರಿಗಳು
ಸಂಕಷ್ಟ ಎದುರಿಸುವಂತಾಗಿದೆ.
ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಮಂಗಳಾದೇವಿ ಮತ್ತು ಶ್ರೀ ಕ್ಷೇತ್ರ ಬೋಳಾರ ಮಾರಿಗುಡಿ ತೆರಳುವ ಬಸ್ಸುಗಳು ಸಂಚರಿಸುವ ಈ ರಸ್ತೆಯು ಜನನಿಬಿಡ ಪ್ರದೇಶವಾಗಿದೆ. ಎಳೆಯ ಮಕ್ಕಳು, ವಯೋ ವೃದ್ಧರು ಈ ಭಾಗದಲ್ಲಿ ತೆರಳುವುದು ಕಷ್ಟಕರವಾಗಿದೆ. ಘನ ವಾಹನಗಳು ಸಂಚರಿಸುವಾಗ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವ ದ್ವಿಚಕ್ರ ವಾಹನಗಳಿಂದ ಪಾದಚಾರಿಗಳಿಗೆ ನಡೆದಾಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಜೆಪ್ಪು ಮಾರ್ಕೆಟ್,ಮಹಾಲಸಾ ಕಂಪ್ಯೂಟರ್ ಕೇಂದ್ರ, ಪ್ರಧಾನ ಮಂತ್ರಿ ಜನೌಷಧಿ,ಬ್ಯಾಂಕುಗಳಿಗೆ ನಿತ್ಯ ದೈನಂದಿನ ತಮ್ಮ ವ್ಯವಹಾರಗಳಿಗೆ ತೆರಳುವವರಿಗೆ ಈ ಭಾಗದಲ್ಲಿ ನಡೆದಾಡುವುದು ದುಸ್ತರ ಎನಿಸಿದೆ.
ಆಯಾಯ ಕಟ್ಟಡಗಳಲ್ಲಿ ಪಾರ್ಕಿಂಗ್ ಮಾಡದೇ ಜನರು ನಡೆದಾಡುವ ಜಾಗದಲ್ಲಿ ಮತ್ತು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವವರಿಗೆ ಸಂಬಂಧ ಪಟ್ಟವರು ದಂಡ ವಿಧಿಸುವ ಅಗತ್ಯತೆ ಇದೆ. ಪ್ರಮುಖವಾಗಿ ಈ ಪ್ರದೇಶದ ಸ್ಥಳೀಯ ಜನಪ್ರತಿನಿಧಿಗಳು ಪಾದಚಾರಿಗಳಿಗೆ ನಡೆದಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಿ ಪಾದಚಾರಿಗಳಿಗೆ ಪ್ರಾಣಕ್ಕೆ ಸಂಕಷ್ಟ ಎದುರಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು