4:13 PM Saturday9 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ…

ಇತ್ತೀಚಿನ ಸುದ್ದಿ

ಜೆಪ್ಪು ಮಾರ್ಕೆಟ್ -ಬೋಳಾರ ಮಾರಿಗುಡಿ ರಸ್ತೆಯಲ್ಲೇ ವಾಹನಗಳ ಪಾರ್ಕಿಂಗ್: ಪಾದಚಾರಿಗಳ ಗೋಳು ಕೇಳುವವರಿಲ್ಲ: ಸ್ಥಳೀಯ ಕಾರ್ಪೋರೇಟರ್ ಏನು ಮಾಡುತ್ತಿದ್ದಾರೆ?

20/04/2024, 15:58

ಮಂಗಳೂರು(reporterkarnataka.com): ನಗರದ ಯಾವುದೇ ಮೂಲೆಗೆ ಹೋಗಿ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುವುದು ಸಾಮಾನ್ಯವಾಗಿ ಹೋಗಿದೆ. ಯಾರಿಗೆ ಏನೇ ತೊಂದರೆಯಾಗಲಿ, ತನ್ನ ವಾಹನ ಪಾರ್ಕಿಂಗ್ ಆದ್ರೆ ಸಾಕು ಎನ್ನುವ ಮನಸ್ಥಿತಿಯೇ ಇದಕ್ಕೆ ಕಾರಣ. ಇಂತಹ ಸಮಸ್ಯೆ ಜೆಪ್ಪು ಮಾರ್ಕೆಟ್- ಬೋಳಾರ ಮಾರಿಗುಡಿ ರಸ್ತೆಯಲ್ಲೂ ಜೀವಂತವಾಗಿದೆ.
ಜೆಪ್ಪು ಮಾರ್ಕೆಟ್ ನಿಂದ ಇತಿಹಾಸ ಪ್ರಸಿದ್ಧ ಬೋಳಾರ ಮಾರಿಗುಡಿ ದೇವಸ್ಥಾನದ ರಥ ಬೀದಿ ರಸ್ತೆ ವರೆಗೆ ವಾಹನಗಳನ್ನು ರಸ್ತೆಯಲ್ಲಿ ಮತ್ತು ಪಾದಚಾರಿಗಳು ನಡೆದಾಡುವ ಜಾಗದಲ್ಲಿ ಪಾರ್ಕಿಂಗ್ ಮಾಡುವುದು ಮಾಮೂಲಿಯಾಗಿದೆ. ಇದರಿಂದ ಪಾದಚಾರಿಗಳು
ಸಂಕಷ್ಟ ಎದುರಿಸುವಂತಾಗಿದೆ.
ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಮಂಗಳಾದೇವಿ ಮತ್ತು ಶ್ರೀ ಕ್ಷೇತ್ರ ಬೋಳಾರ ಮಾರಿಗುಡಿ ತೆರಳುವ ಬಸ್ಸುಗಳು ಸಂಚರಿಸುವ ಈ ರಸ್ತೆಯು ಜನನಿಬಿಡ ಪ್ರದೇಶವಾಗಿದೆ. ಎಳೆಯ ಮಕ್ಕಳು, ವಯೋ ವೃದ್ಧರು ಈ ಭಾಗದಲ್ಲಿ ತೆರಳುವುದು ಕಷ್ಟಕರವಾಗಿದೆ. ಘನ ವಾಹನಗಳು ಸಂಚರಿಸುವಾಗ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವ ದ್ವಿಚಕ್ರ ವಾಹನಗಳಿಂದ ಪಾದಚಾರಿಗಳಿಗೆ ನಡೆದಾಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಜೆಪ್ಪು ಮಾರ್ಕೆಟ್,ಮಹಾಲಸಾ ಕಂಪ್ಯೂಟರ್ ಕೇಂದ್ರ, ಪ್ರಧಾನ ಮಂತ್ರಿ ಜನೌಷಧಿ,ಬ್ಯಾಂಕುಗಳಿಗೆ ನಿತ್ಯ ದೈನಂದಿನ ತಮ್ಮ ವ್ಯವಹಾರಗಳಿಗೆ ತೆರಳುವವರಿಗೆ ಈ ಭಾಗದಲ್ಲಿ ನಡೆದಾಡುವುದು ದುಸ್ತರ ಎನಿಸಿದೆ.
ಆಯಾಯ ಕಟ್ಟಡಗಳಲ್ಲಿ ಪಾರ್ಕಿಂಗ್ ಮಾಡದೇ ಜನರು ನಡೆದಾಡುವ ಜಾಗದಲ್ಲಿ ಮತ್ತು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವವರಿಗೆ ಸಂಬಂಧ ಪಟ್ಟವರು ದಂಡ ವಿಧಿಸುವ ಅಗತ್ಯತೆ ಇದೆ. ಪ್ರಮುಖವಾಗಿ ಈ ಪ್ರದೇಶದ ಸ್ಥಳೀಯ ಜನಪ್ರತಿನಿಧಿಗಳು ಪಾದಚಾರಿಗಳಿಗೆ ನಡೆದಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಿ ಪಾದಚಾರಿಗಳಿಗೆ ಪ್ರಾಣಕ್ಕೆ ಸಂಕಷ್ಟ ಎದುರಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು