8:01 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರಿನ‌ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸಂತ ಜೋಸೆಫ್ ವಾರ್ಡಿನ ವಾರ್ಷಿಕ ಹಬ್ಬ

22/04/2024, 14:16

ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಚರ್ಚಿನ ಸಂತ ಜೋಸೆಫ್ ವಾರ್ಡಿನ ವಾರ್ಷಿಕ ಹಬ್ಬ ವಾರ್ಡಿನ ವಿನ್ಸೆಂಟ್ ಪಿಂಟೋ ಅವರ ತೆರೆದ ಮೈದಾನದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಅಲ್ಬನ್ ಡಿಸೋಜ ಅವರು ವಹಿಸಿದ್ದು, ಈ ವಾರ್ಡ್ ಬಹಳಷ್ಟು ಪ್ರಗತಿ ಹೊಂದಿದೆ. ವಾರ್ಡಿನ ಸರ್ವತೋಮುಖ ಅಭಿವೃದ್ದಿ ನಾವು ನೋಡುತ್ತಾ ಇದ್ದೇವೆ ಎಂದು ಶ್ಲಾಘಿಸಿ ಶುಭ ಹಾರೈಸಿದರು.
ಚರ್ಚಿನ ಪಾಲನಾ ಸಮಿತಿ ಉಪಾಧ್ಯಕ್ಷರಾದ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೊ, 21 ಆಯೋಗಗಳ ಸಂಯೋಜಕ ಜೊಸ್ಲಿನ್ ಲೋಬೊ ಉಪಸ್ಥಿತರಿದ್ದು, ಶುಭ ಹಾರೈಸಿದರು.
ವಾರ್ಡಿನ ಮುಖ್ಯಸ್ಥೆ ಶೀಲಾ ಡಿಸೋಜ ಅವರು ಅತಿಥಿಗಳನ್ನು ಸ್ವಾಗತಿಸಿದರು. ವಾರ್ಡಿನ ಪರವಾಗಿ ಕಳೆದ 7 ವರ್ಷಗಳಿಂದ ನಿರಂತರ ವಾರ್ಡಿನ ಮುಖ್ಯಸ್ಥರಾಗಿ ಸೇವೆಯನ್ನು ನೀಡುತ್ತಿರುವ ಶೀಲಾ ಡಿಸೋಜ ಅವರನ್ನು ಫಲ- ಪುಷ್ಟ ಹಾಗೂ ಶಾಲು ಹೊದೆಸಿ ಸನ್ಮಾನಿಸಲಾಯಿತು. ವಾರ್ಡಿನ ಪ್ರತಿನಿಧಿ ಸವಿತಾ ಡಿಕುನ್ನಾ ಅವರು ವರದಿ ವಾಚಿಸಿದರು. ಮತ್ತೋರ್ವ ಪ್ರತಿನಿಧಿ ಅರುಣ್ ಪಿಂಟೋ ಉಪಸ್ಥಿತರಿದ್ದರು. ವಿಲ್ಮಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.
ವಾರ್ಡಿನ ಎಲ್ಲ ವಯಸ್ಸಿನ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಇತರ ವಾರ್ಡಿನ ಮುಖ್ಯಸ್ಥರು, ಚರ್ಚಿನ ಸಂಘ- ಸಂಸ್ಥೆಗಳ
ಮುಖ್ಯಸ್ಥರು ಭಾಗವಹಿಸಿದ್ದರು. ಸಹ ಭೋಜನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು