12:13 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್…

ಇತ್ತೀಚಿನ ಸುದ್ದಿ

ಮಂಗಳೂರಿನ‌ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸಂತ ಜೋಸೆಫ್ ವಾರ್ಡಿನ ವಾರ್ಷಿಕ ಹಬ್ಬ

22/04/2024, 14:16

ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಚರ್ಚಿನ ಸಂತ ಜೋಸೆಫ್ ವಾರ್ಡಿನ ವಾರ್ಷಿಕ ಹಬ್ಬ ವಾರ್ಡಿನ ವಿನ್ಸೆಂಟ್ ಪಿಂಟೋ ಅವರ ತೆರೆದ ಮೈದಾನದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಅಲ್ಬನ್ ಡಿಸೋಜ ಅವರು ವಹಿಸಿದ್ದು, ಈ ವಾರ್ಡ್ ಬಹಳಷ್ಟು ಪ್ರಗತಿ ಹೊಂದಿದೆ. ವಾರ್ಡಿನ ಸರ್ವತೋಮುಖ ಅಭಿವೃದ್ದಿ ನಾವು ನೋಡುತ್ತಾ ಇದ್ದೇವೆ ಎಂದು ಶ್ಲಾಘಿಸಿ ಶುಭ ಹಾರೈಸಿದರು.
ಚರ್ಚಿನ ಪಾಲನಾ ಸಮಿತಿ ಉಪಾಧ್ಯಕ್ಷರಾದ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೊ, 21 ಆಯೋಗಗಳ ಸಂಯೋಜಕ ಜೊಸ್ಲಿನ್ ಲೋಬೊ ಉಪಸ್ಥಿತರಿದ್ದು, ಶುಭ ಹಾರೈಸಿದರು.
ವಾರ್ಡಿನ ಮುಖ್ಯಸ್ಥೆ ಶೀಲಾ ಡಿಸೋಜ ಅವರು ಅತಿಥಿಗಳನ್ನು ಸ್ವಾಗತಿಸಿದರು. ವಾರ್ಡಿನ ಪರವಾಗಿ ಕಳೆದ 7 ವರ್ಷಗಳಿಂದ ನಿರಂತರ ವಾರ್ಡಿನ ಮುಖ್ಯಸ್ಥರಾಗಿ ಸೇವೆಯನ್ನು ನೀಡುತ್ತಿರುವ ಶೀಲಾ ಡಿಸೋಜ ಅವರನ್ನು ಫಲ- ಪುಷ್ಟ ಹಾಗೂ ಶಾಲು ಹೊದೆಸಿ ಸನ್ಮಾನಿಸಲಾಯಿತು. ವಾರ್ಡಿನ ಪ್ರತಿನಿಧಿ ಸವಿತಾ ಡಿಕುನ್ನಾ ಅವರು ವರದಿ ವಾಚಿಸಿದರು. ಮತ್ತೋರ್ವ ಪ್ರತಿನಿಧಿ ಅರುಣ್ ಪಿಂಟೋ ಉಪಸ್ಥಿತರಿದ್ದರು. ವಿಲ್ಮಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.
ವಾರ್ಡಿನ ಎಲ್ಲ ವಯಸ್ಸಿನ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಇತರ ವಾರ್ಡಿನ ಮುಖ್ಯಸ್ಥರು, ಚರ್ಚಿನ ಸಂಘ- ಸಂಸ್ಥೆಗಳ
ಮುಖ್ಯಸ್ಥರು ಭಾಗವಹಿಸಿದ್ದರು. ಸಹ ಭೋಜನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು