12:49 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ…

ಇತ್ತೀಚಿನ ಸುದ್ದಿ

ವಿಶ್ವ ಭೂದಿನ: ಕದ್ರಿ ಪಾರ್ಕ್ ನಲ್ಲಿ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ ಬಳಕೆ, ಹಸಿ ಕಸದಿಂದ ಗೊಬ್ಬರ ತಯಾರಿ, ಬಯೋ ಎಂಜೈಮ್ ಬಗ್ಗೆ ಪ್ರಾತ್ಯಕ್ಷಿಕೆ

22/04/2024, 19:15

ಮಂಗಳೂರು(reporterkarnataka.com): ಏಪ್ರಿಲ್ 22ರ ವಿಶ್ವ ಭೂದಿನದ ಪ್ರಯುಕ್ತ ‘ಪರಿಸರಕ್ಕಾಗಿ ನಾವು’ ಗುಂಪಿನ ದಕ್ಷಿಣ ಕನ್ನಡ, ಉಡುಪಿ ಘಟಕದ ಸರೋಜಾ ಪ್ರಕಾಶ್- ಪ್ರಕಾಶ್ ದಂಪತಿ ಹಾಗೂ ಅಶ್ವಿನಿ ಕೆ. ಭಟ್ ಅವರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಸಂಜೆ ಎರಡು ತಾಸು ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ ಬಳಕೆ, ಹಸಿ ಕಸದಿಂದ ಗೊಬ್ಬರ ತಯಾರಿ, ಬಯೋ ಎಂಜೈಮ್ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿ
ಕೊಟ್ಟರು.
ಘೋಷಣಾ ವಾಕ್ಯಗಳನ್ನು ಮನೆಯಲ್ಲೇ ಲಭ್ಯವಿದ್ದ ಹಳೆ ರಟ್ಟು, ಕಾಗದಗಳನ್ನು ಪಯೋಗಿಸಿ, ಹಳೆ ಪಿವಿಸಿ ಪೈಪ್ ಗಳಿಗೆ ಅಂಟಿಸಿ ಫಲಕಗಳನ್ನು ಮಾಡಿ ಪ್ರದರ್ಶನಕ್ಕೆ ಇಟ್ಟಿದ್ದರು. ಸದಸ್ಯೆಯರಾದ ದೇವಕಿ ಜಿ ಕೆ., ಅಂಜನಿ ವಸಂತ್ ಹಾಗೂ ಸಮಾನಮನಸ್ಕರು ಅವರಿಗೆ ಸಹಕರಿಸಿದರು. ಈ ವರ್ಷದ ಭೂದಿನದ ಘೋಷಣೆಯು ‘ಭೂಗ್ರಹ vs ಪ್ಲಾಸ್ಟಿಕ್’. ಪ್ಲಾಸ್ಟಿಕ್ ನ ದುಷ್ಪರಿಣಾಮಗಳು, ಅದಕ್ಕೆ ಪರ್ಯಾಯ, ಗೊಬ್ಬರ ತಯಾರಿಕೆ ಬಗ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಬಂತು. ಸಾಧಾರಣ 60 ಜನರನ್ನು ತಲಪಲು ಸಾಧ್ಯವಾಯಿತು. ಮುಂಗಡವಾಗಿ ಈ ಮೇಲ್ ಮೂಲಕ ಪಾರ್ಕಿನ ಆಡಳಿತದವರಿಂದ ಅನುಮತಿಯನ್ನು ಪಡೆದು ಈ ಕಾರ್ಯಕ್ರಮವನ್ನು ಮಾಡಲಾಯಿತು. ಮುಂದೆಯೂ ಈ ರೀತಿಯ ಸರಳ ವಿಧಾನಗಳಿಂದ ಹೆಚ್ಚಿನ ಜನರಲ್ಲಿ ಅರಿವನ್ನು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯೋಜನೆಯಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಒಗ್ಗೂಡಿದರೆ ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಸಂಚಾಲಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು