6:10 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ವಿಶ್ವ ಭೂದಿನ: ಕದ್ರಿ ಪಾರ್ಕ್ ನಲ್ಲಿ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ ಬಳಕೆ, ಹಸಿ ಕಸದಿಂದ ಗೊಬ್ಬರ ತಯಾರಿ, ಬಯೋ ಎಂಜೈಮ್ ಬಗ್ಗೆ ಪ್ರಾತ್ಯಕ್ಷಿಕೆ

22/04/2024, 19:15

ಮಂಗಳೂರು(reporterkarnataka.com): ಏಪ್ರಿಲ್ 22ರ ವಿಶ್ವ ಭೂದಿನದ ಪ್ರಯುಕ್ತ ‘ಪರಿಸರಕ್ಕಾಗಿ ನಾವು’ ಗುಂಪಿನ ದಕ್ಷಿಣ ಕನ್ನಡ, ಉಡುಪಿ ಘಟಕದ ಸರೋಜಾ ಪ್ರಕಾಶ್- ಪ್ರಕಾಶ್ ದಂಪತಿ ಹಾಗೂ ಅಶ್ವಿನಿ ಕೆ. ಭಟ್ ಅವರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಸಂಜೆ ಎರಡು ತಾಸು ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ ಬಳಕೆ, ಹಸಿ ಕಸದಿಂದ ಗೊಬ್ಬರ ತಯಾರಿ, ಬಯೋ ಎಂಜೈಮ್ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿ
ಕೊಟ್ಟರು.
ಘೋಷಣಾ ವಾಕ್ಯಗಳನ್ನು ಮನೆಯಲ್ಲೇ ಲಭ್ಯವಿದ್ದ ಹಳೆ ರಟ್ಟು, ಕಾಗದಗಳನ್ನು ಪಯೋಗಿಸಿ, ಹಳೆ ಪಿವಿಸಿ ಪೈಪ್ ಗಳಿಗೆ ಅಂಟಿಸಿ ಫಲಕಗಳನ್ನು ಮಾಡಿ ಪ್ರದರ್ಶನಕ್ಕೆ ಇಟ್ಟಿದ್ದರು. ಸದಸ್ಯೆಯರಾದ ದೇವಕಿ ಜಿ ಕೆ., ಅಂಜನಿ ವಸಂತ್ ಹಾಗೂ ಸಮಾನಮನಸ್ಕರು ಅವರಿಗೆ ಸಹಕರಿಸಿದರು. ಈ ವರ್ಷದ ಭೂದಿನದ ಘೋಷಣೆಯು ‘ಭೂಗ್ರಹ vs ಪ್ಲಾಸ್ಟಿಕ್’. ಪ್ಲಾಸ್ಟಿಕ್ ನ ದುಷ್ಪರಿಣಾಮಗಳು, ಅದಕ್ಕೆ ಪರ್ಯಾಯ, ಗೊಬ್ಬರ ತಯಾರಿಕೆ ಬಗ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಬಂತು. ಸಾಧಾರಣ 60 ಜನರನ್ನು ತಲಪಲು ಸಾಧ್ಯವಾಯಿತು. ಮುಂಗಡವಾಗಿ ಈ ಮೇಲ್ ಮೂಲಕ ಪಾರ್ಕಿನ ಆಡಳಿತದವರಿಂದ ಅನುಮತಿಯನ್ನು ಪಡೆದು ಈ ಕಾರ್ಯಕ್ರಮವನ್ನು ಮಾಡಲಾಯಿತು. ಮುಂದೆಯೂ ಈ ರೀತಿಯ ಸರಳ ವಿಧಾನಗಳಿಂದ ಹೆಚ್ಚಿನ ಜನರಲ್ಲಿ ಅರಿವನ್ನು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯೋಜನೆಯಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಒಗ್ಗೂಡಿದರೆ ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಸಂಚಾಲಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು