4:32 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು: ಬಹುನಿರೀಕ್ಷಿತ ಕೊಂಕಣಿ ಸಿನಿಮಾ ‘ಪಯಣ್’ ಚಿತ್ರೀಕರಣ ಆರಂಭ

23/04/2024, 10:27

ಮಂಗಳೂರು(reporterkarnataka.com): ʻಸಂಗೀತ್ ಘರ್ʼ ಬ್ಯಾನರ್ನಡಿಯಲಿ ತಯಾರಾಗುವ ಯೊಡೆಲಿಂಗ್ ಕಿಂಗ್ ಮೆಲ್ವಿನ್‍ ಪೆರಿಸ್ ಮತ್ತು ನಿರ್ದೇಶಕ ಜೋಯಲ್ ಪಿರೇರಾ ಅವರ ಚೊಚ್ಚಲ ಕೊಂಕಣಿ ಚಲನಚಿತ್ರ ‘ಪಯಣ್’ (ಪ್ರಯಾಣ) ಇದರ ಚಿತ್ರೀಕರಣ ಶುಕ್ರವಾರ, ನಗರದ ʻವೈಟ್ ಡವ್ಸ್ʼ ನಿರಾಶ್ರಿತರ ಆಶ್ರಮದಲ್ಲಿ ಆರಂಭಗೊಂಡಿತು.


ನೀಟಾ ಪೆರಿಸ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ʻಸಂಗೀತ್ ಗುರುʼ ಎಂದೇ ಪ್ರಸಿದ್ಧರಾಗಿರುವ ಜೋಯಲ್ ಪಿರೇರಾ ಅವರು ನಿರ್ದೇಶಿಸುತ್ತಿದ್ದಾರೆ. ಚಲನಚಿತ್ರದ ಚಿತ್ರಕಥೆ ಮತ್ತು ಸಂಭಾಷಣೆಯ ಹೊಣೆಯನ್ನೂ ಅವರೇ ಹೊತ್ತಿದ್ದಾರೆ. ಚಿತ್ರದ ಗೀತೆ ರಚನೆ ಮತ್ತು ರಾಗಗಳು ಮೆಲ್ವಿನ್‍ಪೆರಿಸರದಾಗಿದ್ದು ಖ್ಯಾತ ಸಂಗೀತ ನಿರ್ದೇಶಕ ರೋಶನ್ ಡಿಸೋಜಾ, ಆಂಜೆಲೋರ್ ಸಂಗೀತ ಸಂಯೋಜಿಸಿದ್ದಾರೆ.
ಚಿತ್ರೀಕರಣಕ್ಕೆ ಮುನ್ನ ಕುಲಶೇಖರ ಚರ್ಚಿನ ಧರ್ಮಗುರು ವಂ. ಫಾ. ಕ್ಲಿಫರ್ಡ್ ಫೆರ್ನಾಂಡಿಸ್, ಪ್ರಾರ್ಥನೆ ನೆರವೇರಿಸಿದರು. ವೈಟ್ ಡವ್ಸ್ನ ಸಂಸ್ಥಾಪಕಿ ಕೊರಿನ್ ರಾಸ್ಕ್ವಿನ್ಹಾ ಅವರು ಕ್ಲಾಪ್ ಹೊಡೆಯುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ, ಭಕ್ತಿ ಸಂಗೀತ ಸೇರಿದಂತೆ ಕೊಂಕಣಿ ಸಂಗೀತ ಕ್ಷೇತ್ರಕ್ಕೆ ಸಲ್ಲಿಸಿದ ಅಪಾರ ಕೊಡುಗೆಗಳಿಗಾಗಿ ಮೆಲ್ವಿನ್‍ಪೆರಿಸ್ ಅವರನ್ನು ಶ್ಲಾಘಿಸಿ ಮಾತನಾಡಿದ ಅವರು ʻಓರ್ವ ಉತ್ತಮ ಗೀತೆ ರಚನೆಕಾರ, ಗಾಯಕ ಹಾಗು ಇನ್ನೋರ್ವ ಮಾಂತ್ರಿಕ ಸಂಗೀತಗಾರ, ಈ ಜೋಡಿಯಿಂದ ನಿರ್ಮಾಣಗೊಳ್ಳುತ್ತಿರುವ ಓರ್ವ ಗಾಯಕನ ಜೀವನ ಪ್ರಯಾಣವನ್ನು ಚಿತ್ರಿಸುವ ಚಿತ್ರವು ಕೊಂಕಣಿ ಚಿತ್ರರಂಗದಲ್ಲಿ ಹೊಸ ಇತಿಹಾಸವೊಂದನ್ನು ನಿರ್ಮಿಸುವಂತಾಗಲಿʼ ಎಂದು ಶುಭ ಕೋರಿದರು.
ಚಿತ್ರದ ತಾರಾಗಣದಲ್ಲಿ ಬ್ರಾಯಾನ್ ಸಿಕ್ವೇರಾ, ಡಾ. ಜಾಸ್ಮಿನ್ ಡಿಸೋಜಾ ಮತ್ತು ಕೇಟ್ ಪಿರೇರಾ ಪ್ರಮುಖ ಪಾತ್ರಗಳಲ್ಲಿದ್ದಾರೆ, ಜೊತೆಗೆ ಶೈನಾ ಡಿಸೋಜಾ, ರೈನೆಲ್ ಸಿಕ್ವೇರಾ, ಲೆಸ್ಲಿ ರೆಗೊ, ಜೆರಿ ರಸ್ಕಿನ್ಹಾ, ವಾಲ್ಟರ್ ನಂದಲಿಕೆ, ಆಲ್ಬರ್ಟ್ ಪೆರಿಸ್, ಜೀವನ್ ವಾಸ್, ಮೆಲಿಶಾ ಪಿಂಟೊ ಮತ್ತು ಜೋಸ್ಸಿ ರೆಗೊ, ಇತರರಿದ್ದಾರೆ.
*ತಾಂತ್ರಿಕ ಸಿಬ್ಬಂದಿ:* ಛಾಯಾಗ್ರಹಣ: ವಿ ರಾಮಾಂಜನೇಯ, ಸಂಕಲನ ಮತ್ತು ಸಹ-ನಿರ್ದೇಶನ: ಮೆವಿಲ್ ಜೋಯಲ್ ಪಿಂಟೊ.

ಇತ್ತೀಚಿನ ಸುದ್ದಿ

ಜಾಹೀರಾತು