12:53 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ…

ಇತ್ತೀಚಿನ ಸುದ್ದಿ

ಎದುರಾಳಿಗಳ ಅಪಪ್ರಚಾರದ ಸವಾಲನ್ನು ತಾಳ್ಮೆಯಿಂದ ಎದುರಿಸೋಣ; ಗೆಲುವು ಖಚಿತ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

23/04/2024, 17:41

ಬಂಟ್ವಾಳ(reporterkarnataka.com): ವರದಿಗಳ ಪ್ರಕಾರವೂ ಕಾಂಗ್ರೆಸ್ ಗೆಲುವು ಖಾತ್ರಿಯಾಗಿದೆ. ಹಾಗೆಂದು ನಾವು ಜಾಗೃತರಾಗಿ ಇರಬೇಕಾಗಿದೆ. ಎದುರಾಳಿ ಪಕ್ಷದವರು ಗೆಲುವಿಗಾಗಿ ಅಪಪ್ರಚಾರದ ಹಾದಿ ಹಿಡಿಯುತ್ತಿದ್ದಾರೆ‌. ಮನೆಮನೆಗೆ ತೆರಳಿ ಗ್ರಂಥ, ತಾಳಿ ಹಿಡಿದು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಮಾಹಿತಿ ಇದೆ. ಆದ್ದರಿಂದ ತಾಳ್ಮೆಯಿಂದ ಸವಾಲನ್ನು ಎದುರಿಸಲು ಸಿದ್ಧರಾಗೋಣ. ಮುಂದಿನ ಎರಡು – ಮೂರು ದಿನ ಎಚ್ಚರಿಕೆಯಿಂದ ಕಾರ್ಯೋನ್ಮುಖರಾಗಬೇಕಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ವಿವಿಧೆಡೆ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.


ದ್ವೇಷದ ರಾಜಕಾರಣ ನಾವೆಂದೂ ಮಾಡಿಲ್ಲ. ಅದರ ಅಗತ್ಯವೂ ನಮಗಿಲ್ಲ. ಕಾಂಗ್ರೆಸ್ ಸರಕಾರದ ಸಾಧನೆ ಹಾಗೂ ನಾವು ಅಭಿವೃದ್ಧಿ ದೃಷ್ಟಿಯಿಂದ ಹಾಕಿಕೊಂಡಿರುವ ಯೋಜನೆಗಳನ್ನು ಜನರಿಗೆ ತಿಳಿಸಿ. ಖಂಡಿತವಾಗಿಯೂ ಜಿಲ್ಲೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಸಾಮರಸ್ಯದ ಗತವೈಭವ ಮರಳಿ ಬರಲಿದೆ ಎಂದು ಅವರು ನುಡಿದರು.
ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಮಾಜಿ ಸಚಿವ ಬಿ. ರಮಾನಾಥ ರೈ ಸೇರಿದಂತೆ ಪ್ರಮುಖರು
ಅಲ್ಲಿಪಾದೆ, ನಾವೂರು, ಅಮ್ಟಾಡಿ, ಮೂಲರಪಟ್ಣ, ಕರ್ಪೆ ಶ್ರೀ ರಾಮಾಂಜನೇಯ ಭಜನಾ ಮಂದಿರ, ಸಿದ್ಧಕಟ್ಟೆ, ರಾಯಿ, ಪಂಜಿಕಲ್ಲು, ಕುಕ್ಕಿಪ್ಪಾಡಿ, ಬಸ್ತಿಕೋಡಿ, ಇರ್ವತ್ತೂರುಪದವು, ಕಾವಲ್ ಕಟ್ಟೆ, ವಗ್ಗ ಮೊದಲಾದ ಪ್ರದೇಶಗಳ ಮತದಾರ, ಕಾರ್ಯಕರ್ತರ ಬಳಿಗೆ ತೆರಳಿ ಮಾತನಾಡಿದರು.
ಮಾಜಿ ಸಚಿವ ಬಿ. ರಮಾನಾಥ ರೈ, ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಸುಧೀಪ್ ಕುಮಾರ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಪ್ರಚಾರ ಸಮಿತಿಯ ಪಿಯೂಷ್ ರೋಡ್ರಿಗಸ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಲವೀನಾ ಮೋರಸ್, ಪಾಣೆಮಂಗಳೂರು ವಲಯ ಅಧ್ಯಕ್ಷೆ ಜಯಂತಿ ಪೂಜಾರಿ, ಸುದರ್ಶನ್ ಜೈನ್, ಬಂಟ್ವಾಳ ಬ್ಲಾಕ್ ಪ್ರಚಾರ ಸಮಿತಿಯ ಜಗದೀಶ್ ಕೊಯಿಲ, ಮಾಯಿಲಪ್ಪ ಸಾಲ್ಯಾನ್, ಕೈಲಾರ್ ಇಬ್ರಾಹಿಂ, ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರಾ, ಇಬ್ರಾಹಿಂ ನವಾಜ್, ಮಧುಸೂಧನ್ ಶೆಣೈ, ಸಂಜೀವ ಗೌಡ, ಚೆನ್ನಪ್ಪ ಸಾಲ್ಯಾನ್, ಅಬ್ದುಲ್ ರಹಿಮಾನ್, ಪರಮೇಶ್ವರ್ ನಾಯಕ್, ಜಯಂತ್, ಮಲ್ಲಿಕಾ ವಿ. ಪೂಜಾರಿ, ಸಂಜೀವ ಪೂಜಾರಿ, ನಾವೂರು ವಲಯ ಅಧ್ಯಕ್ಷ ವಿಜಯ, ಉಮೇಶ್ ಕುಲಾಲ್, ಸುರೇಶ್ ಕುಲಾಲ್, ಅಶ್ವನಿ ಕುಮಾರ್, ಕರ್ಪೆ ಶ್ರೀ ರಾಮಾಂಜನೇಯ ಭಜನಾ ಮಂದಿರದ ಅಧ್ಯಕ್ಷ ರಮೇಶ್, ಉಸ್ತುವಾರಿ ಶಶಿಧರ್ ಪ್ರಭು, ಉಪಾಧ್ಯಕ್ಷ ರಮೇಶ್, ದಯಾನಂದ ಗೌಡ, ಪ್ರಕಾಶ್ ಜೈನ್, ವಿಕ್ಟರ್, ದಿನೇಶ್ ಶೆಟ್ಟಿ, ಮೋಹನ್ ಶೆಟ್ಟಿ, ಕೃಷ್ಣಪ್ಪ ಕುಲಾಲ್, ವಿಶ್ವನಾಥ ಶೆಟ್ಟಿ, ದೇವಪ್ಪ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು