9:55 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:…

ಇತ್ತೀಚಿನ ಸುದ್ದಿ

ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

24/04/2024, 12:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊರಳವಾಡಿ, ದೇವನೂರು, ಗಟ್ಟವಾಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಾಜಿ ಶಾಸಕ ಹರ್ಷವರ್ಧನ್ ಅವರು ಬಿಜೆಪಿ ಅಭ್ಯರ್ಥಿ ಬಾಲರಾಜು ಪರ ಮತಯಾಚನೆ ಮಾಡಿದರು.


ಗ್ರಾಮ, ಗ್ರಾಮಗಳಿಗೆ ತೆರಳಿ ಮತದಾರರನ್ನು ಭೇಟಿ ಮಾಡಿ ಕರಪತ್ರ ನೀಡುವ ಮೂಲಕ ಅಭ್ಯರ್ಥಿ ಬಾಲರಾಜ್ ಅವರಿಗೆ ಮತ ನೀಡುವಂತೆ ಮನವಿ ಮಾಡಿಕೊಂಡರು.
ಬಳಿಕ ಅವರು ಮಾತನಾಡಿ ಕಳೆದ ಹತ್ತು ತಿಂಗಳ ಹಿಂದೆ ಮಾಡಿದ ತಪ್ಪನ್ನು ಈಗ ಮಾಡಬೇಡಿ ಕ್ಷೇತ್ರಕ್ಕೆ ನಾವು ಮಾಡಿದ ಅಭಿವೃದ್ಧಿಯನ್ನು ಮರೆತು ಬಿಜೆಪಿಯನ್ನು ಸೋಲಿಸಿ ಈಗ 10 ತಿಂಗಳಿಂದ ಯಾವುದೇ ಅಭಿವೃದ್ಧಿ ಕಾಣದೆ ತಾವೇ ವ್ಯಥೆ ಪಡುವಂತಾಗಿದೆ. ಈ ಚುನಾವಣೆಯಲ್ಲಿ ಅಂತಹ ತಪ್ಪು ಮಾಡದೆ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರನ್ನು ಗೆಲ್ಲಿಸುವ ಮೂಲಕ ಬಿಜೆಪಿ ಹಾಗೂ ಮೋದಿಯವರ ಕೈ ಬಲಪಡಿಸಬೇಕು. ದೇಶ ಮತ್ತು ರಾಜ್ಯ ಅಭಿವೃದ್ಧಿ ಆಗ ಬೇಕಾದರೆ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ಮಾಡಬೇಕು ಎಂದು ಕಾರ್ಯಕರ್ತ ಮುಖಂಡರಲ್ಲಿ ಮನವಿ ಮಾಡಿಕೊಂಡರು.
ನಿಕಟಪೂರ್ವ ಮಂಡಲ ಅಧ್ಯಕ್ಷ ವಕೀಲ ಮಹೇಶ್ ಮಾತನಾಡಿ ಮಾಜಿ ಶಾಸಕರು ನಮ್ಮ ಕ್ಷೇತ್ರಕ್ಕೆ ಹಾಗೂ ನಮ್ಮ ಗ್ರಾಮಗಳಿಗೆ ಕೋಟ್ಯಾಂತರ ರೂಪಾಯಿ ಅನುದಾನ ತಂದು ಅಭಿವೃದ್ಧಿಪಡಿಸಿದ್ದರು. ಆದರೆ ಅದನ್ನು ಸ್ಮರಿಸದೆ ಯಾವುದೋ ಕಾರಣಕ್ಕೆ ಅವರನ್ನು ಸೋಲಿಸಿದ್ದು ನಿಜಕ್ಕೂ ವಿಷಾದನೀಯ. ಆದರೆ ಈಗ ಆ ತಪ್ಪು ಮಾಡದೆ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರಿಗೆ ಮತ ನೀಡುವಂತೆ ಕೇಳಿಕೊಂಡರು.
ಪ್ರಚಾರಕ್ಕೆ ಬಂದ ಮಾಜಿ ಶಾಸಕರು ಹಾಗೂ ಮುಖಂಡರನ್ನು ಗ್ರಾಮಸ್ಥರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಗೌರವಿಸಿದರು
ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ, ಮಾಜಿ ಅಧ್ಯಕ್ಷ ಹೊರಳವಾಡಿ ಮಹೇಶ್, ಬದನವಾಳು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಶ್, ಶಾಮ್ ಪಟೇಲ್, ರಂಗನಾಥ್, ಹೆಮ್ಮರಗಾಲ ಸೋಮಣ್ಣ, ಶಿವಣ್ಣ, ಮುಳ್ಳೂರು ಶೇಖರ್,ಮಸಗೆರಾಜು, ಮಹದೇವಸ್ವಾಮಿ ಸೇರಿದಂತೆ ಹಲವಾರು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು