4:06 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ನಂಜನಗೂಡು: ನೇಹಾ ಹಿರೇಮಠ್ ಕೊಲೆ ಪ್ರಕರಣ ಖಂಡಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತಿಭಟನೆ

24/04/2024, 12:27

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನೇಹಾ ಹಿರೇಮಠ್ ಹತ್ಯೆ ಖಂಡಿಸಿ ನಂಜನಗೂಡಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತಿಭಟನೆ ನಡೆಸಲಾಯಿತು.

ನಂಜನಗೂಡು ನಗರದ ತಾಲೂಕು ಆಡಳಿತ ಭಾಗದ ಮುಂಭಾಗದಲ್ಲಿ ಜಮಾಯಿಸಿದ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಹೋಗಿ ಆಕ್ರೋಶ ವ್ಯಕ್ತಪಡಿಸಿದರು.
ವೀರಶೈವ ಲಿಂಗಾಯಿತ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಬಸವಣ್ಣ ಮಾತನಾಡಿ, ಹುಬ್ಬಳ್ಳಿಯಲ್ಲಿ ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಮಾಡಲಾಗಿದೆ. ಆರೋಪಿಯ ಪರ ಸರ್ಕಾರ ನಿಂತಿದೆ. ಕೂಡಲೇ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು. ಉತ್ತರ ಪ್ರದೇಶದ ಮಾದರಿಯಲ್ಲಿ ಆತನ ಆಸ್ತಿಯನ್ನು ವಶಪಡಿಸಿಕೊಳ್ಳಬೇಕು. ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯನ್ನು ಕರೆದು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಅವರ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು