7:49 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಕೊರೊನಾ ಸಂಕಷ್ಟ: ನೊಂದ ಬಡ ಕುಟುಂಬಗಳ ಜತೆ ನಿಂತ ಮಸ್ಕಿಯ ಅಭಿನಂದನ್ ಸಂಸ್ಥೆ

19/05/2021, 15:10

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಪಟ್ಟಣದಲ್ಲಿ ಕೊರೊನಾ 2ನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವನ್ನು ಆರಂಭಿಸಿದೆ.

ಈ ಅಭಿಯಾನದ ಮೂಲಕ ಬಡ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ಗಳನ್ನು ನೀಡುವ ಯೋಜನೆಯನ್ನು ರೂಪಿಸಿದ್ದು, ಈ ಯೋಜನೆಗೆ ಬುಧವಾರದಂದು ಮಸ್ಕಿಯ ತಹಸಿಲ್ದಾರ್ ಬಲರಾಮ್ ಕಟ್ಟಿಮನಿ ಹಾಗೂ ಪುರಸಭೆಯ ಮುಖ್ಯ ಅಧಿಕಾರಿ ಹನುಮಂತಮ್ಮ ನಾಯಕ್ ಅವರಿಂದ ಚಾಲನೆ ನೀಡಿದರು. ಈ ಸಂದರ್ಭದಲ್ಲಿ

ಮಾತನಾಡಿದ ತಹಸಿಲ್ದಾರ್ ಬಲರಾಮ್ ಕಟ್ಟಿಮನಿ ಅವರು ಅಭಿನಂದನ್ ಸಂಸ್ಥೆಯು ಕಳೆದ ವರ್ಷವೂ ಆಗಿದ್ದಂತಹ ಲಾಕ್ ಡೌನ್ ನಲ್ಲಿ ಸಾವಿರಾರು ಬಡ ಕುಟುಂಬಗಳಿಗೆ ಆಹಾರ ದಾನ್ಯಗಳನ್ನು ಹಾಗೂ ವೈದ್ಯಕೀಯ ಸೌಲಭ್ಯವನ್ನು ಕಲ್ಪಿಸಿದ್ದು, ಅದೇ ರೀತಿಯಾಗಿ ಈ ಬಾರಿಯ ಲಾಕ್ ಡೌನ್ ನಿಂದಾಗಿ ಕಂಗಾಲಾದ ಕುಟುಂಬಗಳಿಗೆ ನೀಡುತ್ತಿರುವುದು ಶ್ಲಾಘನೆಯ ಕಾರ್ಯ.  ಸಂಸ್ಥೆಯ ಎಲ್ಲಾ ಕಾರ್ಯಗಳಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.  ಈ ಸಂದರ್ಭದಲ್ಲಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಜೀವಗಳಿಗೆ ವೈಧ್ಯಕೀಯ ಚಿಕಿತ್ಸೆ ಕೊಡಿಸಲು ಸಂಸ್ಥೆಯು ಒಪ್ಪಿಕೊಂಡಿತು.  

ಪುರಸಭೆಯ ಮುಖ್ಯ ಅಧಿಕಾರಿ ಹನುಮಂತಮ್ಮ ನಾಯಕ್, ಸಿರಸ್ತೇದಾರ ಅಕ್ತರ್, ಅಭಿನಂದನ್ ಸಂಸ್ಥೆಯ ಕಾರ್ಯದರ್ಶಿಗಳಾದ ರಾಮಣ್ಣ ಹಂಪರಗುಂದಿ, ಸಂಸ್ಥೆಯ ಸದಸ್ಯರಾದ ಬಸವರಾಜ ಸ್ವಾಮಿ, ಮಲ್ಲಿಕಾರ್ಜುನ ಬಡಿಗೇರ್, ಅಮೀತ್ ಕುಮಾರ್ ಪುಟ್ಟಿ, ಮಂಜುನಾಥ ಮಸ್ಕಿ, ಕೀಶೋರ್, ಪವನ್ ಮುಕ್ತಿ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು