12:10 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಂಗಳೂರು ಪಿ.ಎ. ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತು ಅಂತಾರಾಷ್ಟ್ರೀಯ ಸಮಾವೇಶ ಉದ್ಘಾಟನೆ

24/04/2024, 19:38

ಮಂಗಳೂರು(reporterkarnataka.com): ಇಂಜಿನಿಯರಿಂಗ್ ವಿಜ್ಞಾನ ಮತ್ತು ತಂತ್ರಜ್ಞಾನ-2024 (ಐಸಿಇಎಸ್ಟಿ-24) ಕುರಿತ ಅಂತಾರಾಷ್ಟ್ರೀಯ ಮಟ್ಟದ ಸಮಾವೇಶದ ಉದ್ಘಾಟನೆ ಏಪ್ರಿಲ್ 23ರಂದು ನಗರದ ಪಿ.ಎ. ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ನಡೆಯಿತು.
ICEST-24 ಒಟ್ಟು ಆರು ಸಮ್ಮೇಳನಗಳನ್ನು ಒಳಗೊಂಡಿದ್ದು, ವಿಭಿನ್ನ ಎಂಜಿನಿಯರಿಂಗ್ ವಿಭಾಗಗಳನ್ನು ಪ್ರತಿನಿಧಿಸುತ್ತದೆ.
ಮುಖ್ಯ ಅತಿಥಿಯಾಗಿ ಆಗಮಿಸಿದ ಮಂಗಳೂರಿನ ಇನ್ಫೋಸಿಸ್ ಹಿರಿಯ ಯೋಜನಾ ವ್ಯವಸ್ಥಾಪಕ ಸೋಹನ್ ಎಂ. ಅವರು ಮಾತನಾಡಿ, ತಾಂತ್ರಿಕ ಶಿಕ್ಷಣದ ಪ್ರಗತಿಯಲ್ಲಿ ಬಹುಶಿಸ್ತೀಯ ವಿಧಾನಗಳ ಪ್ರಾಮುಖ್ಯತೆಯನ್ನು ವಿವರಿಸಿದರು.
ಮುಖ್ಯ ಭಾಷಣ ಮಾಡಿದ ವಿಗ್ನಾನ್ (Vignan’s) ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಡಾ. ಪಿ. ನಾಗಭೂಷಣ್ ಅವರು ಮಾತನಾಡಿ ಪ್ರಸಕ್ತ ಸನಿವೇಶದಲ್ಲಿ ಕೃತಕ ಬುದ್ಧಿಮತ್ತೆಯ ಮಹತ್ವವನ್ನು ಚರ್ಚಿಸಿದರು ಮತ್ತು ಸ್ಮಾರ್ಟ್ ಯುಗದಲ್ಲಿ ಕಂಪ್ಯೂಟರ್, ಕೃತಕ ಬುದ್ಧಿಮತ್ತೆ ಜ್ಞಾನದ ಜೊತೆಗೆ ಇತರ ವಿಷಯದ ಜ್ಞಾನ ಅಗತ್ಯ ಎಂದರು.
ಅಬ್ದುಲ್ಲಾ ಇಬ್ರಾಹಿಂ, ಮ್ಯಾನೇಜಿಂಗ್ ಟ್ರಸ್ಟಿ ಪಿ.ಎ. ಸಮೂಹ ಸಂಸ್ಥೆಗಳು ಮಂಗಳೂರು ಇವರು ಮಾತನಾಡಿ, ಸಂಶೋಧನೆ ಮತ್ತು ಅದರ ಪ್ರಭಾವದ ಬಗ್ಗೆ ಮಾತನಾಡಿದರು. ಪಿ.ಎ. ಕಾಲೇಜಿನಲ್ಲಿನ ವಿವಿಧ ಸಂಶೋಧನಾ ಕೇಂದ್ರಗಳ ಸಂಶೋಧನೆಗೆ ಪೂರಕ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಗೌರವ ಅತಿಥಿಗಳಾದ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಇದರ ಪ್ರಾಂಶುಪಾಲರಾದ ಡಾ. ಸಲೀಮುಲ್ಲಾ ಖಾನ್ ಮತ್ತು ಪಿ.ಎ ಪಾಲಿಟೆಕ್ ನ ಪ್ರಾಂಶುಪಾಲರಾದ ಡಾ. ಕೆ.ಪಿ. ಸೂಫಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ICEST-24 ನ ಜನರಲ್ ಚೇರ್ ಮತ್ತು ಪಿ.ಎ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ಡಾ. ರಮಿಸ್ ಎಂ.ಕೆ ಅವರು ಅಧ್ಯಕ್ಷತೆ ವಹಿಸಿದ್ದರು.
ಪಿ.ಎ ಸಮೂಹ ಸಂಸ್ಥೆಗಳ ವಿದ್ಯಾರ್ಥಿ ವ್ಯವಹಾರಗಳ ಡೀನ್ ಡಾ. ಸಯ್ಯದ್ ಅಮೀನ್ ಅಹ್ಮದ್ ಮತ್ತು ಹ್ಯಾರಿಸ್ ಟಿ.ಡಿ., ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಇತರೆ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿ ಅಬ್ದುಲ್ ಅಬ್ದು ಸಮದ್ ಪ್ರಾರ್ಥಿಸಿದರು, ICEST-24 ರ ಸಂಯೋಜಕ ಡಾ. ಶರೀಫ್ರಾಜು ಜೆ. ಉಕ್ಕುಂದ್ ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ಡಾ. ಶರ್ಮಿಳಾ ಕುಮಾರಿ ಪ್ರಸ್ತಾವಿಕ ಭಾಷಣ ಮಾಡಿದರು. ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಕೃಷ್ಣ ಪ್ರಸಾದ್ ಎನ್. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು