12:36 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ…

ಇತ್ತೀಚಿನ ಸುದ್ದಿ

ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಸಾಮೂಹಿಕ ವಿವಾಹ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ

24/04/2024, 23:23

ಮಂಗಳೂರು(reporterkarnataka.com): ಹತ್ತಾರು ವಿನೂತನ ಕಾರ್ಯಕ್ರಮಗಳ ಮೂಲಕ ಸೇವಾ ರಂಗದಲ್ಲಿ ಜನ ಮನ್ನಣೆ ಪಡೆದ ಲತೀಫ್ ಗುರುಪುರ ನೇತೃತ್ವದ ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ 10 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಇತ್ತೀಚಿಗೆ ಉಚ್ಚಿಲ ಸೋಮೇಶ್ವರ ಕಿಯಂಝಾ ಗಾರ್ಡನ್ ನಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಪಾಣಕ್ಕಾಡ್ ಸ್ವಾಬಿಕಲಿ ಶಿಹಾಬ್ ತಂಙಳ್ ದುಆ ನೆರವೇರಿಸಿದರು. ಸೆಯ್ಯದ್ ಅಲೀ ತಂಙಳ್ ಕುಂಬೋಲ್ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಯ್ಯದ್ ಜಿಫ್ರಿ ತಂಗಳ್ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಖಾಹ್ ನೇತೃತ್ವ ವಹಿಸಿದರು. ಸಯ್ಯದ್ ಜಮಲುಲ್ಲೈಲಿ ತಂಙಳ್ ಕಾಜೂರು ಲೋಗೋ ಬಿಡುಗಡೆಗೊಳಿಸಿದರು.
ಸಮಸ್ತ ಮುಶಾವರ ಬಿ.ಕೆ.ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ, ಉಸ್ಮಾನುಲ್ ಫೈಝಿ ತೋಡಾರ್, ಫಿರೋಝ್ ಕುಂನ್ನುಪರಂಬಿಲ್, ಬದ್ರುದ್ದೀನ್ ಅಝ್ಹರಿ, ಹುಸೈನ್ ದಾರಿಮಿ, ಎಸ್.ಬಿ ದಾರಿಮಿ, ಅನೀಸ್ ಕೌಸರಿ ರಫೀಕ್ ಮಾಸ್ಟರ್, ಝಕಾರಿಯ ಮೋಡುಶೆಡ್ಡೆ, ಸಹೋದರ ಬಶೀರ್, ಖಲೀಲ್ ಒಗ್ಗ, ನೌಶಾದ್ ಇನೋಳಿ ಮತ್ತಿತರರು ಉಪಸ್ಥಿತರಿದ್ದರು.
ಜಮಾಲುದ್ದೀನ್ ದಾರಿಮಿ ಕುತುಬಾ ಪಾರಾಯಣ ನೆರವೇರಿಸಿದರು. ಸಂಘಟಕರಾದ ಇಮ್ರಾನ್ ಅಡ್ಡೂರು ಸ್ವಾಗತಿಸಿ, ಇಕ್ಬಾಲ್ ಬಾಳಿಲ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು