4:39 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಸಾಮೂಹಿಕ ವಿವಾಹ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ

24/04/2024, 23:23

ಮಂಗಳೂರು(reporterkarnataka.com): ಹತ್ತಾರು ವಿನೂತನ ಕಾರ್ಯಕ್ರಮಗಳ ಮೂಲಕ ಸೇವಾ ರಂಗದಲ್ಲಿ ಜನ ಮನ್ನಣೆ ಪಡೆದ ಲತೀಫ್ ಗುರುಪುರ ನೇತೃತ್ವದ ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ 10 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಇತ್ತೀಚಿಗೆ ಉಚ್ಚಿಲ ಸೋಮೇಶ್ವರ ಕಿಯಂಝಾ ಗಾರ್ಡನ್ ನಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಪಾಣಕ್ಕಾಡ್ ಸ್ವಾಬಿಕಲಿ ಶಿಹಾಬ್ ತಂಙಳ್ ದುಆ ನೆರವೇರಿಸಿದರು. ಸೆಯ್ಯದ್ ಅಲೀ ತಂಙಳ್ ಕುಂಬೋಲ್ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಯ್ಯದ್ ಜಿಫ್ರಿ ತಂಗಳ್ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಖಾಹ್ ನೇತೃತ್ವ ವಹಿಸಿದರು. ಸಯ್ಯದ್ ಜಮಲುಲ್ಲೈಲಿ ತಂಙಳ್ ಕಾಜೂರು ಲೋಗೋ ಬಿಡುಗಡೆಗೊಳಿಸಿದರು.
ಸಮಸ್ತ ಮುಶಾವರ ಬಿ.ಕೆ.ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ, ಉಸ್ಮಾನುಲ್ ಫೈಝಿ ತೋಡಾರ್, ಫಿರೋಝ್ ಕುಂನ್ನುಪರಂಬಿಲ್, ಬದ್ರುದ್ದೀನ್ ಅಝ್ಹರಿ, ಹುಸೈನ್ ದಾರಿಮಿ, ಎಸ್.ಬಿ ದಾರಿಮಿ, ಅನೀಸ್ ಕೌಸರಿ ರಫೀಕ್ ಮಾಸ್ಟರ್, ಝಕಾರಿಯ ಮೋಡುಶೆಡ್ಡೆ, ಸಹೋದರ ಬಶೀರ್, ಖಲೀಲ್ ಒಗ್ಗ, ನೌಶಾದ್ ಇನೋಳಿ ಮತ್ತಿತರರು ಉಪಸ್ಥಿತರಿದ್ದರು.
ಜಮಾಲುದ್ದೀನ್ ದಾರಿಮಿ ಕುತುಬಾ ಪಾರಾಯಣ ನೆರವೇರಿಸಿದರು. ಸಂಘಟಕರಾದ ಇಮ್ರಾನ್ ಅಡ್ಡೂರು ಸ್ವಾಗತಿಸಿ, ಇಕ್ಬಾಲ್ ಬಾಳಿಲ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು