11:31 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ ನಿರ್ವಹಿಸುವಂತೆ ಎಚ್ಚರಿಕೆ

25/04/2024, 20:11

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆ ನಂಜನಗೂಡು ಮತ್ತು ವರುಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿಗಳು ತೆರಳಲು ಜಿಲ್ಲಾ ಮತ್ತು ತಾಲೂಕು ಆಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.


ನಂಜನಗೂಡು ಪಟ್ಟಣದ ಜೂನಿಯರ್ ಕಾಲೇಜು ಮತ್ತು ಜೆಎಸ್ಎಸ್ ಕಾಲೇಜಿನ ಮೈದಾನದಲ್ಲಿ ಚುನಾವಣೆ ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡುವ ಮೂಲಕ ಚುನಾವಣಾ ಸಲಕರಣೆಗಳನ್ನು ನೀಡಿ ಆಯಾ ಮತಗಟ್ಟೆಗಳಿಗೆ ತೆರಳಲು ಅನುವು ಮಾಡಿಕೊಡಲಾಯಿತು. ನಂಜನಗೂಡಿನ ತಹಶೀಲ್ದಾರ್ ಹಾಗೂ ಚುನಾವಣಾ ಅಧಿಕಾರಿಗಳೂ ಆದ ಶಿವಕುಮಾರ್ ಕಾಸನೂರು ಅವರ ಮಾರ್ಗದರ್ಶನದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ 246 ಮತ್ತು ವರುಣ ವಿಧಾನಸಭೆ ಕ್ಷೇತ್ರದ 261 ಮತಗಟ್ಟೆಗಳಿಗೆ ಎಆರ್‌ಓ, ಎಪಿಆರ್‌ಓ ಮತ್ತು ಮೂವರು ಸಹಾಯಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.
ವರುಣ ವಿಧಾನಸಭಾ ಕ್ಷೇತ್ರದಲ್ಲಿ 31 ಸೂಕ್ಷ್ಮ ಮತಗಟ್ಟೆಗಳಿವೆ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ 43 ಸೂಕ್ಷ್ಮ ಮತಗಟ್ಟೆಗಳಿದ್ದು ಎಲ್ಲ ಮತಗಟ್ಟೆಗಳಿಗೆ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನ ನಿಯೋಜನೆ ಮಾಡಲಾಗಿದೆ.
ಕ್ಷೇತ್ರದ ಪ್ರತಿ ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಮತದಾನವನ್ನು ನಡೆಸಬೇಕು ಎಂದು ಚುನಾವಣಾ ಸಿಬ್ಬಂದಿಗಳಿಗೆ ಮಾರ್ಗದರ್ಶನ ಮತ್ತು ತರಬೇತಿಯನ್ನು ನೀಡಲಾಗಿದೆ.
ಯಾವುದಾದರೂ ಮತಗಟ್ಟೆಯಲ್ಲಿ ಸಮಸ್ಯೆ ಕಂಡು ಬಂದಲ್ಲಿ ಕೂಡಲೇ ಚುನಾವಣಾ ಅಧಿಕಾರಿ ಮತ್ತು ಸೆಕ್ಟರ್ ಅಧಿಕಾರಿಯ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಮುಂದಾಗಬೇಕು. ಅಧಿಕಾರಿಗಳಿಂದ ಲೋಪ ದೋಷ ಕಂಡು ಬಂದಲ್ಲಿ ಶಿಸ್ತು ಕ್ರಮಕ್ಕೂ ಮುಂದಾಗ ಬೇಕಾಗುತ್ತದೆ ಜಾಗೃತಿಯಿಂದ ಕೆಲಸ ಮಾಡಿ ನಂಜನಗೂಡು ಮತ್ತು ವರುಣ ಕ್ಷೇತ್ರಗಳಲ್ಲಿ ಹೆಚ್ಚು ಮತದಾನ ನಡೆಯಲು ಸಹಕಾರಿಯಾಗಬೇಕು ಎಂದು ನಂಜನಗೂಡು ಚುನಾವಣಾ ಅಧಿಕಾರಿ ಶಿವಕುಮಾರ್ ಕಾಸನೂರು ಮತ್ತು ಸಹಾಯಕ ಚುನಾವಣೆ ಅಧಿಕಾರಿ ಜಗನ್ನಾಥ ಮೂರ್ತಿ ಮಸ್ಟರಿಂಗ್ ಪ್ರಕ್ರಿಯೆ ಬಗ್ಗೆ ವಿವರಿಸಿದರು
ಇದೇ ಸಂದರ್ಭ ಜಿಲ್ಲಾಧಿಕಾರಿ ಡಾಕ್ಟರ್ ಕೆ ವಿ ರಾಜೇಂದ್ರ ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಎಚ್ಚರಿಕೆ ಹಾಗೂ ಜಾಗೃತೆ ಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ ಎಂದು ಮತಗಟ್ಟೆ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ನಂತರ ಎಲ್ಲಾ ಮತಗಟ್ಟೆ ಅಧಿಕಾರಿಗಳು ತಮ್ಮ ತಮ್ಮ ಮತಗಟ್ಟೆಗಳಿಗೆ ಚುನಾವಣಾ ಸಾಮಗ್ರಿಗಳೊಂದಿಗೆ ಬಸ್ ಗಳತ್ತ ದೌಡಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು