2:28 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ

26/04/2024, 16:58

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನಲ್ಲಿ ಮಧ್ಯಾಹ್ನ 4:00 ಹೊತ್ತಿಗೆ ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿಯುತ ಹಾಗೂ ಬಿರುಸಿನ ಮತದಾನ ನಡೆದು ಸುಮಾರು ಶೇ. 65 ನಡೆದಿರುವುದಾಗಿ ತಿಳಿದು ಬಂದಿದೆ.
ಬೆಳಗ್ಗೆ ಮಂದಗತಿಯಲ್ಲಿ ಪ್ರಾರಂಭವಾದ ಮತದಾನ ಮಧ್ಯಾಹ್ನದ ವೇಳೆಗೆ ಚುರುಕುಗೊಂಡಿತು.


ನಂಜನಗೂಡು ನಗರವು ಸೇರಿದಂತೆ ಕ್ಷೇತ್ರದಾದ್ಯಂತ ಕೆಲವೇಡೆ ಮತದಾನ ಮಂದಗತಿಯಲ್ಲಿ ನಡೆದರೆ ಕೆಲವೇಡೆ ಬಿರುಸಿನ ಮತದಾನ ನಡೆಯಿತು. ಮತದಾನದಲ್ಲಿ ವಿಕಲಚೇತನರು, ವೃದ್ಧರಾದಿಯಾಗಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದ್ದು ವಿಶೇಷವಾಗಿತ್ತು.
ಇನ್ನು ತಮ್ಮ ತಮ್ಮ ಮತಗಟ್ಟೆಗಳ ಬಳಿ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಮುಖಂಡರುಗಳು ಟೇಬಲ್ ಶಾಮಿಯಾನ ಹಾಕಿ ಮತದಾನಕ್ಕೆ ಹೋಗುವ ಮತದಾರರನ್ನು ತಡೆದು ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವಂತೆ ಕೊನೆಯದಾಗಿ ಮತಯಾಚನೆ ಮಾಡುತ್ತಿದ್ದರು.
ಕೆಲವೆಡೆ ಎರಡು ಪಕ್ಷಗಳ ಮುಖಂಡರು ತಮ್ಮ ತಮ್ಮ ಪಕ್ಷಗಳ ಹಾಗು ನಾಯಕರುಗಳ ಪರ ಜಯಕಾರದ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.
ಇದೇ ಸಂದರ್ಭ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಸ್. ಮಹದೇವಯ್ಯ ನಂಜನಗೂಡಿನ ಸರ್ಕಾರಿ ಜೂನಿಯರ್ ಕಾಲೇಜು ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಳಿಕ ಅವರು ಮಾತನಾಡಿ ನನ್ನ ವೋಟು ನಂಜನಗೂಡಿನಲ್ಲಿ ಇದ್ದು ಈಗ ಕುಟುಂಬ ಸಮೇತರಾಗಿ ಮತ ಚಲಾಯಿಸಿ ಬಂದಿದ್ದೇನೆ ಅಲ್ಲದೆ ಪಟ್ಟಣದ ವಿವಿಧ ಮತಗಟ್ಟೆಗಳಿಗೆ ತೆರಳಿ ವೀಕ್ಷಣೆ ಮಾಡಿದ ಸಂದರ್ಭದಲ್ಲಿ ನಮ್ಮ ಅಭ್ಯರ್ಥಿ ಬಾಲರಾಜ್ ಅವರಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಹಾಗೂ ಮತ ಚಲಾವಣೆಯಾಗಿದ್ದು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಅಂತರದಿಂದ ಜಯಗಳಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ನಂಜನಗೂಡು ನಗರ ಬಿಜೆಪಿ ಮಂಡಲ ಅಧ್ಯಕ್ಷ ಸಿದ್ದರಾಜು ಮಾತನಾಡಿ ನಗರದ ಎಲ್ಲಾ ಬೂತ್ ಗಳಲ್ಲಿ ಬಿಜೆಪಿಗೆ ಹೆಚ್ಚಿನ ಮತ ಚಲಾವಣೆಯಾಗಿದ್ದು ನಂಜನಗೂಡಿನಲ್ಲಿ ಬಿಜೆಪಿ ಹೆಚ್ಚು ಬಹುಮತ ಕೊಡುವುದಾಗಿ ತಿಳಿಸಿದರು.
ಚುನಾವಣಾ ವೇಳೆ ನಂಜನಗೂಡು ಪಟ್ಟಣದ ಗುರುಭವನ ಹಾಗೂ ತಾಲೂಕಿನ ಬಾಗೂರು ಮತ್ತು ಮಾದಾಪುರ ಗ್ರಾಮಗಳ ಮತಗಟ್ಟೆಗಳಲ್ಲಿ ಮತಯಂತ್ರ ಕೈಕೊಟ್ಟು ನಂತರ ಅವುಗಳನ್ನು ಬದಲಾಯಿಸಿ ಮತದಾನ ನಡೆಸಲಾಯಿತು. ಇದರಿಂದ ಅರ್ಧ ಗಂಟೆ ತಡವಾಗಿ ಮತದಾನ ಪ್ರಾರಂಭಗೊಂಡಿರುವುದಾಗಿ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು