7:59 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮದುವೆ ಮಂಟಪದಂತೆ ಸಿಂಗಾರಗೊಂಡ ಮತದಾನ ಕೇಂದ್ರ; ಬಿಳಿ ಪಂಚೆ -ಶರ್ಟು, ಮೈಸೂರು ಪೇಟ ತೊಟ್ಟ ಅಧಿಕಾರಿಗಳು!!

26/04/2024, 17:56

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ತೆಂಗಿನ ಗರಿಯ ಚಪ್ಪರ ಹಾಕಿ ಮಾವು, ಬಾಳೆ, ತಳಿರು ತೋರಣಗಳಿಂದ ಸಿಂಗಾರಗೊಂಡ ಮತದಾನ ಕೇಂದ್ರ, ಬಿಳಿ ಪಂಚೆ, ಶರ್ಟಿನ ಜೊತೆ ಮೈಸೂರು ಪೇಟ ಧರಿಸಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು. ಹಾಗಾದ್ರೆ ವಿಭಿನ್ನ ಮತ್ತು ವಿಶೇಷ ಕಾರ್ಯವೈಖರಿಗೆ ಕಾರಣ ಏನು ಅಂತೀರಾ ಇಲ್ಲಿದೆ ನೋಡಿ..!


ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಜೆಎಸ್ಎಸ್ ಕಾಲೇಜಿನ ಮತಗಟ್ಟೆಯಲ್ಲಿ ನಡೆಯುತ್ತಿರುವ ಮತದಾನ.
ಬಿಳಿ ಶರ್ಟ್ ಪಂಚೆ, ಮೈಸೂರು ಪೇಟ ಧರಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರಾದ ಚುನಾವಣಾ ಸಿಬ್ಬಂದಿಗಳು.
ಪ್ರಜಾಪ್ರಭುತ್ವದ ಹಬ್ಬ ಆಚರಣೆಗೆ ಸಾಂಸ್ಕೃತಿಕ ಸೌರಭ ಎಂಬ ಮತಗಟ್ಟೆ ತೆರೆದು ವಿನೂತನವಾಗಿ ಮತದಾರರಿಂದ ಮತದಾನ ಮಾಡಿಸಿಕೊಳ್ಳುತ್ತಿರುವ ಅಧಿಕಾರಿಗಳು.
ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಯುವ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಖಿ, ರೈತ ಮತ್ತು ಯುವ ಮತಗಟ್ಟೆಗಳನ್ನು ತೆರೆಯಲಾಗಿದೆ ಆದರೆ ಇಲ್ಲಿ ತೆಂಗಿನ ಗರಿಯ ಚಪ್ಪರಹಾಕಿ ಮಾವು, ಬಾಳೆ,ತಳಿರು ಕಟ್ಟಿ ಸ್ವಾಗತಿಸಿ ಮತದಾರರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿರುವ ಮತಗಟ್ಟೆಯಾಗಿದೆ.
ಚುನಾವಣಾ ಅಧಿಕಾರಿಗಳ ಈ ಒಂದು ಪ್ರಜಾಪ್ರಭುತ್ವದ ಹಬ್ಬದ ಕಾರ್ಯವೈಕರಿಗೆ ಹ್ಯಾಟ್ಸಾಫ್ ಎನ್ನುತ್ತಾರೆ ಮತದಾರರು.
.

ಇತ್ತೀಚಿನ ಸುದ್ದಿ

ಜಾಹೀರಾತು