8:09 AM Wednesday27 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ದ.ಕ. ಲೋಕಸಭೆ ಕ್ಷೇತ್ರದಲ್ಲಿ ಬಹುತೇಕ ಶಾಂತಿಯುತ ಎಲೆಕ್ಷನ್ : ಶೇ. 71.83 ಮತದಾನ

26/04/2024, 22:27

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕರಾವಳಿಯ ದ.ಕ. ಲೋಕಸಭೆ ಕ್ಷೇತ್ರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ದ.ಕ.ದಲ್ಲಿ ಶೇ. 71.83ರಷ್ಟು ಮತದಾನವಾಗಿದೆ. ನಗರದ ಉರ್ವ ಕೆನರಾ ಹೈಸ್ಕೂಲಿನಲ್ಲಿ ಡಿ ಮಸ್ಟರಿಂಗ್ ಪ್ರಕ್ರಿಯೆ ನಡೆಯುತ್ತಿದೆ.
ಇಂದು ಬೆಳಗ್ಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರ ವರೆಗೆ ಮತದಾನ ನಡೆದಿದೆ. ನಗರದ ಪಂಪ್ ವೆಲ್ ಬಳಿಯ ಕಪಿತಾನಿಯೊ ಮತಗಟ್ಟೆ ಸಮೀಪ ಬಿಜೆಪಿ ಕಾರ್ಯಕರ್ತರು ಎನ್ನಲಾದ ಕೆಲವರು ಗದ್ದಲ ನಿರ್ಮಿಸಿರುವುದನ್ನು ಬಿಟ್ಟರೆ ಶಾಂತಿಯುತ ಮತದಾನ ನಡೆದಿದೆ. ಇದೀಗ ಜಿಲ್ಲೆಯ ಎಲ್ಲ 1876 ಮತಗಟ್ಟೆಗಳಿಂದ ಚುನಾವಣಾ ಸಿಬ್ಬಂದಿಗಳು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಜತೆ ನಗರದ ಉರ್ವ ಕೆನರಾ ಹೈಸ್ಕೂಲಿನ ಡಿ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ್ದಾರೆ. ಇಲ್ಲಿಂದ ಸುರತ್ಕಲ್ ನ ಎನ್ ಐಟಿಕೆ ಸ್ಟ್ರಾಂಗ್ ಕೊಠಡಿಗೆ ಇವಿಎಂಗಳನ್ನು ಸಾಗಿಸಲಾಗುವುದು.
ಜಿಲ್ಲೆಯಾದ್ಯಂತ 1876 ಮತಗಟ್ಟೆಗಳಿದ್ದು, ಒಟ್ಟು11, 255 ಮಂದಿ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿತ್ತು.

ಇದರಲ್ಲಿ ಅಧಿಕಾರಿಗಳು ಕೂಡ ಸೇರಿದ್ದಾರೆ. 2251 ಮಂದಿ ಪ್ರಿಸೈಡಿಂಗ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಇಂದು ಬೆಳಗ್ಗೆಯೇ ನಗರದ ಉರ್ವ ಕೆನರಾ ಹೈಸ್ಕೂಲಿನಲ್ಲಿ ಚುನಾವಣಾ ಸಿಬ್ಬಂದಿಗಳಿಗೆ ಕೊನೆಯ ಹಂತದ ಸಿದ್ದತೆಗಳನ್ನು ನಡೆಸಲಾಯಿತು. ಜಿಲ್ಲಾದ್ಯಂತವಿರುವ 1876 ಮತಗಟ್ಟೆಗಳಿಗೆ ಇವಿಎಂ ಮೆಷಿನೊಂದಿಗೆ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾದ ವಾಹನದಲ್ಲಿ ಭದ್ರತೆಯೊಂದಿಗೆ ಕಳುಹಿಸಿಕೊಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು