2:40 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ದ.ಕ. ಲೋಕಸಭೆ ಕ್ಷೇತ್ರದಲ್ಲಿ ಬಹುತೇಕ ಶಾಂತಿಯುತ ಎಲೆಕ್ಷನ್ : ಶೇ. 71.83 ಮತದಾನ

26/04/2024, 22:27

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕರಾವಳಿಯ ದ.ಕ. ಲೋಕಸಭೆ ಕ್ಷೇತ್ರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ದ.ಕ.ದಲ್ಲಿ ಶೇ. 71.83ರಷ್ಟು ಮತದಾನವಾಗಿದೆ. ನಗರದ ಉರ್ವ ಕೆನರಾ ಹೈಸ್ಕೂಲಿನಲ್ಲಿ ಡಿ ಮಸ್ಟರಿಂಗ್ ಪ್ರಕ್ರಿಯೆ ನಡೆಯುತ್ತಿದೆ.
ಇಂದು ಬೆಳಗ್ಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರ ವರೆಗೆ ಮತದಾನ ನಡೆದಿದೆ. ನಗರದ ಪಂಪ್ ವೆಲ್ ಬಳಿಯ ಕಪಿತಾನಿಯೊ ಮತಗಟ್ಟೆ ಸಮೀಪ ಬಿಜೆಪಿ ಕಾರ್ಯಕರ್ತರು ಎನ್ನಲಾದ ಕೆಲವರು ಗದ್ದಲ ನಿರ್ಮಿಸಿರುವುದನ್ನು ಬಿಟ್ಟರೆ ಶಾಂತಿಯುತ ಮತದಾನ ನಡೆದಿದೆ. ಇದೀಗ ಜಿಲ್ಲೆಯ ಎಲ್ಲ 1876 ಮತಗಟ್ಟೆಗಳಿಂದ ಚುನಾವಣಾ ಸಿಬ್ಬಂದಿಗಳು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಜತೆ ನಗರದ ಉರ್ವ ಕೆನರಾ ಹೈಸ್ಕೂಲಿನ ಡಿ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ್ದಾರೆ. ಇಲ್ಲಿಂದ ಸುರತ್ಕಲ್ ನ ಎನ್ ಐಟಿಕೆ ಸ್ಟ್ರಾಂಗ್ ಕೊಠಡಿಗೆ ಇವಿಎಂಗಳನ್ನು ಸಾಗಿಸಲಾಗುವುದು.
ಜಿಲ್ಲೆಯಾದ್ಯಂತ 1876 ಮತಗಟ್ಟೆಗಳಿದ್ದು, ಒಟ್ಟು11, 255 ಮಂದಿ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿತ್ತು.

ಇದರಲ್ಲಿ ಅಧಿಕಾರಿಗಳು ಕೂಡ ಸೇರಿದ್ದಾರೆ. 2251 ಮಂದಿ ಪ್ರಿಸೈಡಿಂಗ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಇಂದು ಬೆಳಗ್ಗೆಯೇ ನಗರದ ಉರ್ವ ಕೆನರಾ ಹೈಸ್ಕೂಲಿನಲ್ಲಿ ಚುನಾವಣಾ ಸಿಬ್ಬಂದಿಗಳಿಗೆ ಕೊನೆಯ ಹಂತದ ಸಿದ್ದತೆಗಳನ್ನು ನಡೆಸಲಾಯಿತು. ಜಿಲ್ಲಾದ್ಯಂತವಿರುವ 1876 ಮತಗಟ್ಟೆಗಳಿಗೆ ಇವಿಎಂ ಮೆಷಿನೊಂದಿಗೆ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾದ ವಾಹನದಲ್ಲಿ ಭದ್ರತೆಯೊಂದಿಗೆ ಕಳುಹಿಸಿಕೊಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು