5:53 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ದ.ಕ. ಲೋಕಸಭೆ ಕ್ಷೇತ್ರದಲ್ಲಿ ಬಹುತೇಕ ಶಾಂತಿಯುತ ಎಲೆಕ್ಷನ್ : ಶೇ. 71.83 ಮತದಾನ

26/04/2024, 22:27

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕರಾವಳಿಯ ದ.ಕ. ಲೋಕಸಭೆ ಕ್ಷೇತ್ರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ದ.ಕ.ದಲ್ಲಿ ಶೇ. 71.83ರಷ್ಟು ಮತದಾನವಾಗಿದೆ. ನಗರದ ಉರ್ವ ಕೆನರಾ ಹೈಸ್ಕೂಲಿನಲ್ಲಿ ಡಿ ಮಸ್ಟರಿಂಗ್ ಪ್ರಕ್ರಿಯೆ ನಡೆಯುತ್ತಿದೆ.
ಇಂದು ಬೆಳಗ್ಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರ ವರೆಗೆ ಮತದಾನ ನಡೆದಿದೆ. ನಗರದ ಪಂಪ್ ವೆಲ್ ಬಳಿಯ ಕಪಿತಾನಿಯೊ ಮತಗಟ್ಟೆ ಸಮೀಪ ಬಿಜೆಪಿ ಕಾರ್ಯಕರ್ತರು ಎನ್ನಲಾದ ಕೆಲವರು ಗದ್ದಲ ನಿರ್ಮಿಸಿರುವುದನ್ನು ಬಿಟ್ಟರೆ ಶಾಂತಿಯುತ ಮತದಾನ ನಡೆದಿದೆ. ಇದೀಗ ಜಿಲ್ಲೆಯ ಎಲ್ಲ 1876 ಮತಗಟ್ಟೆಗಳಿಂದ ಚುನಾವಣಾ ಸಿಬ್ಬಂದಿಗಳು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಜತೆ ನಗರದ ಉರ್ವ ಕೆನರಾ ಹೈಸ್ಕೂಲಿನ ಡಿ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ್ದಾರೆ. ಇಲ್ಲಿಂದ ಸುರತ್ಕಲ್ ನ ಎನ್ ಐಟಿಕೆ ಸ್ಟ್ರಾಂಗ್ ಕೊಠಡಿಗೆ ಇವಿಎಂಗಳನ್ನು ಸಾಗಿಸಲಾಗುವುದು.
ಜಿಲ್ಲೆಯಾದ್ಯಂತ 1876 ಮತಗಟ್ಟೆಗಳಿದ್ದು, ಒಟ್ಟು11, 255 ಮಂದಿ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿತ್ತು.

ಇದರಲ್ಲಿ ಅಧಿಕಾರಿಗಳು ಕೂಡ ಸೇರಿದ್ದಾರೆ. 2251 ಮಂದಿ ಪ್ರಿಸೈಡಿಂಗ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಇಂದು ಬೆಳಗ್ಗೆಯೇ ನಗರದ ಉರ್ವ ಕೆನರಾ ಹೈಸ್ಕೂಲಿನಲ್ಲಿ ಚುನಾವಣಾ ಸಿಬ್ಬಂದಿಗಳಿಗೆ ಕೊನೆಯ ಹಂತದ ಸಿದ್ದತೆಗಳನ್ನು ನಡೆಸಲಾಯಿತು. ಜಿಲ್ಲಾದ್ಯಂತವಿರುವ 1876 ಮತಗಟ್ಟೆಗಳಿಗೆ ಇವಿಎಂ ಮೆಷಿನೊಂದಿಗೆ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾದ ವಾಹನದಲ್ಲಿ ಭದ್ರತೆಯೊಂದಿಗೆ ಕಳುಹಿಸಿಕೊಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು