5:41 AM Sunday13 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಹಾಸನದ ಅಶ್ಲೀಲ ವೀಡಿಯೊ ಪ್ರಕರಣ: ಸಮಗ್ರ ತನಿಖೆ ನಡೆಸಿ ಕಠಿಣ ಶಿಕ್ಷೆ ನೀಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

29/04/2024, 12:24

ಬೆಂಗಳೂರು(reporterkarnataka.com): ಹಾಸನದ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಸಂಬಂಧಿಸಿದ ಲೈಂಗಿಕ ಹಗರಣದ ಸಮಗ್ರ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹಿಸಿದೆ.
ಈ ಕುರಿತು ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮ ಅವರು ಪತ್ರಿಕಾ ಪ್ರಕಟನೆ ಹೊರಡಿಸಿ,
ದೇಶದಾದ್ಯಂತ ವೈರಲ್ ಆಗುತ್ತಿರುವ ಹಾಸನ ರಾಜಕಾರಣಿಯ ಪೆನ್ ಡ್ರೈವ್ ವೀಡಿಯೋ ಪ್ರಕರಣ ಪೈಶಾಚಿಕ ಕೃತ್ಯವಾಗಿದೆ. ಇದರಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ಎಂದಿದ್ದಾರೆ.
ಬೇಲಿಯೇ ಎದ್ದು ಹೊಲ ಮೇಯ್ದಂತೆ, ಓರ್ವ ಜನಸೇವಕನಾಗಿ ಮಹಿಳಾ ಸುರಕ್ಷತೆಯನ್ನು ಖಾತರಿಪಡಿಸಬೇಕಾದ ರಾಜಕಾರಣಿಗಳ ಸುಪರ್ದಿಯಲ್ಲೂ ಹೆಣ್ಣು ಸುರಕ್ಷಿತಳಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಿದೆ.
ತಾನೋರ್ವ ಘನತೆವೆತ್ತ ಸ್ಥಾನದಲ್ಲಿರುವ ಜನಪ್ರತಿನಿಧಿ ಎಂಬುದನ್ನು ಮರೆತು, ಆಮಿಷ, ಬೆದರಿಕೆಗಳ ಮೂಲಕ
ಸುಮಾರು ಎರಡು ಸಾವಿರದಷ್ಟು ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿದ್ದೇ ಅಲ್ಲದೆ, ಅದನ್ನು ಸ್ವತಃ ವೀಡಿಯೋ ಚಿತ್ರೀಕರಿಸಿ ವಿಕೃತಿ ಮೆರೆದಿರುವ ಈ ರಾಜಕಾರಣಿಯನ್ನು ಬಂಧಿಸಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯವೊದಗಿಸಬೇಕು. ಹೆಣ್ಣನ್ನು ಕೇವಲ ಭೋಗದ ವಸ್ತುವಾಗಿಸಿ, ಆಕೆಯ ಸ್ವಾಭಿಮಾನ, ಘನತೆ, ಗೌರವಗಳೊಂದಿಗೆ ಚೆಲ್ಲಾಟವಾಡಿರುವ ಈ ಅಪ್ರಬುದ್ಧ ರಾಜಕಾರಣಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ವೀಡಿಯೋವನ್ನು ಪೆನ್ ಡ್ರೈವಿನಿಂದ ಪ್ರಸಾರ ಮಾಡಿದವರನ್ನೂ ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು.ಇದಕ್ಕಾಗಿ ವಿಶೇಷ ಕ್ಷಿಪ್ರ ತನಿಖಾ ತಂಡ ರಚಿಸಿ ಸಂತ್ರಸ್ತರಿಗೆ ಅಗತ್ಯ ಕಾನೂನು ಸಹಕಾರ, ಭದ್ರತೆ ಖಾತ್ರಿಪಡಿಸಬೇಕು. ವೈರಲ್ ಆಗುತ್ತಿರುವ ವೀಡಿಯೋ ಪ್ರಸಾರವನ್ನು ತಕ್ಷಣ ತಡೆಹಿಡಿಯುವ ವ್ಯವಸ್ಥೆಯನ್ನು ಮಾಡಬೇಕೆಂದು ಫಾತಿಮಾ ನಸೀಮ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು