7:37 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಕಾಂತೇಶ್

01/05/2024, 17:00

ಬೆಂಗಳೂರು(reporterkatnataka.com):ಮಾಜಿ ಉಪ ಮುಖ್ಯಮಂತ್ರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡುಕೋರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕೆ.ಇ.ಕಾಂತೇಶ್ ಅವರು ತಮ್ಮ ವಿರುದ್ಧ ಮಾನಹಾನಿ ವರದಿ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ನಿಂದ ಮಾಧ್ಯಮಗಳ ವಿರುದ್ಧ ಮಧ್ಯಂತರ ತಡೆಯಾಜ್ಞೆ ತಂದಿದ್ದಾರೆ.

ಕಾಂತೇಶ್ ಅವರು ಸಲ್ಲಿಸಿದ್ದ ದಾವೆಯ ವಿಚಾರಣೆ ನಡೆಸಿದ ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ ಈ ಪ್ರತಿಬಂಧಕಾಜ್ಞೆ ನೀಡಿದರು.
ಕೆ.ಇ.ಕಾಂತೇಶ್ ಅವರು 50 ಮಾಧ್ಯಮಗಳ ಹೆಸರು ಉಲ್ಲೇಖಿಸಿದ್ದು, ಯಾರೇ ಆದರೂ ದೂರಿನಲ್ಲಿ ಉಲ್ಲೇಖಿಸಿದ ರೀತಿ ಮಾನಹಾನಿ ಮಾಡುವಂತಹ ಮಾಹಿತಿ ಪ್ರಸಾರ ಮಾಡಬಾರದು ಎಂದು ಕೋರಿದ್ದರು.
ಅಶ್ಲೀಲ ವಿಡಿಯೊ ಪ್ರಸಾರ, ಫೋಟೋ, ವರದಿ ಮುದ್ರಣ, ಅವುಗಳ ಹಂಚಿಕೆ ಮಾಡಬಾರದು. ಇದಕ್ಕೆ ಪ್ರತಿಬಂಧಕಾಜ್ಞೆ ನೀಡಲಾಗಿದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.
ಇದರಂತೆ, ಪ್ರತಿವಾದಿಗಳಿಗೆ ನೋಟಿಸ್, ಸಮನ್ಸ್ ಜಾರಿ ಮಾಡಿದ ನ್ಯಾಯಾಲಯವು ಈ ದಾವೆಯ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿದೆ.
*ದಾವೆಯಲ್ಲಿ ಏನಿದೆ?: ಕೆ. ಇ. ಕಾಂತೇಶ್ ಅವರ ಪರವಾಗಿ ವಕೀಲ ಎಂ ವಿನೋದ್ ಕುಮಾರ್‌ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು. ಪ್ರತಿವಾದಿಗಳ ಸ್ಥಾನದಲ್ಲಿರುವ ಇಂಟರ್ನೆಟ್, ಟಿವಿ ಮಾಧ್ಯಮ, ಪತ್ರಿಕೆಗಳಲ್ಲಿ ದೂರುದಾರರ ವಿರುದ್ಧ ಆಕ್ಷೇಪಾರ್ಹವಾದ ಸುದ್ದಿ ಪ್ರಸಾರವಾಗುತ್ತಿದೆ. ಈ ಮೂಲಕ ದೂರುದಾರರ ವರ್ಚಸ್ಸು ಹಾಳು ಮಾಡಲು ಪ್ರಯತ್ನಿಸಲಾಗುತ್ತಿದೆ. ಲೋಕಸಭಾ ಚುನಾವಣೆ ರಾಜಕೀಯವಾಗಿ ಮಹತ್ವ ಪಡೆದುಕೊಂಡ ಸಂದರ್ಭವಾದ ಕಾರಣ, ದೂರುದಾರರಿಗೆ ಮಾನಹಾನಿಯಿಂದ ರಕ್ಷಣೆ ಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು