2:25 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು 138 ಮಂದಿ ಅಸ್ವಸ್ಥಗೊಂಡ ಪ್ರಕರಣ: ಆರೋಗ್ಯ ಇಲಾಖೆಯ ಕೈಸೇರಿದ ಪ್ರಯೋಗಾಲಯ ವರದಿ

01/05/2024, 19:03

ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ಹಲವರು ಅಸ್ವಸ್ಥಗೊಂಡ ಪ್ರಕರಣಕ್ಕೆ
ಸಂಬಂಧಿಸಿದಂತೆ ಪ್ರಯೋಗಾಲಯ ಪರೀಕ್ಷಾ ವರದಿ ಹೊರಬಂದಿದ್ದು, ಎಳನೀರು ಸಹಜವಾಗಿತ್ತು. ಕಲಬೆರಕೆಯಾಗಿಲ್ಲ ಎಂದು ವರದಿ ತಿಳಿಸಿದೆ.
ಈ ವರದಿ ಇದೀಗ ಜಿಲ್ಲಾ ಆರೋಗ್ಯ ಇಲಾಖೆಯ ಕೈಸೇರಿದೆ. ಎಳನೀರು ಸಹಜವಾಗಿತ್ತು. ಕಲಬೆರಕೆಯಾಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ ಎಂದು ತಿಳಿದು ಬಂದಿದೆ.
ಏಪ್ರಿಲ್ 9ರಂದು ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ
138 ಮಂದಿ ವಾಂತಿಬೇಧಿಯಿಂದ ಅಸ್ವಸ್ಥಗೊಂಡಿದ್ದರು.
ಪ್ರಕರಣದ ಗಂಭೀರತೆಯನ್ನು ಅರಿತ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಆದರೆ
ಘಟನೆ ನಡೆದ ಎರಡು ದಿನಗಳ ಪ್ರಯೋಗಾಲಯ ಪರೀಕ್ಷೆಯ ವರದಿ ಎ.22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.
ಜೊತೆಗೆ ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ
ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿಯ
ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ
ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ
ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ
ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ
ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ
ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು