10:28 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಏರುತ್ತಿರುವ ತಾಪಮಾನ: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು; ಊರು ತುಂಬಾ ಮೆರವಣಿಗೆ

01/05/2024, 19:11

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಳೆಯಿಲ್ಲದೆ ಬಿರು ಬಿಸಿಲ ಬೇಗೆಗೆ ತತ್ತರಿಸಿದ ಜನರು ಕಪ್ಪೆಗೆ ಮದುವೆ ಮಾಡಿಸಿದ ಪ್ರಸಂಗ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದ್ದು,ನಂತರ ಕಪ್ಪೆಗಳ ಮೆರವಣಿಗೆ ನಡೆಸಲಾಯಿತು.
ಬತ್ತಿಹೋದ ಕೆರೆಕಟ್ಟೆಗಳು ಅಂತರ್ಜಲವಿಲ್ಲದೆ ಖಾಲಿ, ಖಾಲಿ ನಿಂತಿರುವ ಬೋರ್ ವೆಲ್ ಗಳಿಂದ ಅಯೋಮಯವಾದ ರೈತರ ಬೆಳೆಗಳು ಮತ್ತು ಜೀವನಕ್ಕೆ ಸಂಕಷ್ಟ ಎದುರಾಗಿದೆ.
ಅತೀವ ಉಷ್ಣಾಂಶ ದಿಂದ ಕೂಡಿದ ಬಿಸಿಲ ಬೇಗೆ ತಾಳಲಾರದ ವಯೋವೃದ್ಧರು, ಮಕ್ಕಳು ಮತ್ತು ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ.



ಇಂತಹ ಸಂಕಷ್ಟ ದಲ್ಲಿ ಕಪ್ಪೆಗಳ ಮದುವೆ ಮಾಡಿಸಿದರೆ ಮಳೆಯಾಗುತ್ತದೆ ಎಂಬುದು ತಲೆತಲಾಂತರದಿಂದ ನಡೆದುಕೊಂಡು ಬಂದ ಹಿರಿಯರ ವಾಡಿಕೆ ಮತ್ತು ನಂಬಿಕೆಯಾಗಿದೆ. ಅದರಂತೆ
ಕಪ್ಪೆಗಳಿಗೆ ಮದುವೆ ಮಾಡಿಸಲಾಯಿತು. ಬಳಿಕ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ನಡೆದ ಕಪ್ಪೆಗಳ ಮದುವೆ ಮೆರವಣಿಗೆ ನಡೆಸಲಾಯಿತು. ಗ್ರಾಮದ ಬೀದಿ ಬೀದಿಗಳಲ್ಲಿ ತಮಟೆ ವಾದ್ಯಗಳೊಂದಿಗೆ ಕಪ್ಪೆಗಳ ಮೆರವಣಿಗೆ ಮಾಡಿ ಮಳೆಗಾಗಿ ಮಹಾದೇವನ ಪ್ರಾರ್ಥನೆ ಮಾಡಲಾಯಿತು.
ಮೆರವಣಿಗೆಯಲ್ಲಿ ಉಯ್ಯೊ ಉಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಮಳೆಗಾಗಿ ಗ್ರಾಮಸ್ಥರು ಪ್ರಾರ್ಥನೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು