10:00 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಏರುತ್ತಿರುವ ತಾಪಮಾನ: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು; ಊರು ತುಂಬಾ ಮೆರವಣಿಗೆ

01/05/2024, 19:11

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಳೆಯಿಲ್ಲದೆ ಬಿರು ಬಿಸಿಲ ಬೇಗೆಗೆ ತತ್ತರಿಸಿದ ಜನರು ಕಪ್ಪೆಗೆ ಮದುವೆ ಮಾಡಿಸಿದ ಪ್ರಸಂಗ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದ್ದು,ನಂತರ ಕಪ್ಪೆಗಳ ಮೆರವಣಿಗೆ ನಡೆಸಲಾಯಿತು.
ಬತ್ತಿಹೋದ ಕೆರೆಕಟ್ಟೆಗಳು ಅಂತರ್ಜಲವಿಲ್ಲದೆ ಖಾಲಿ, ಖಾಲಿ ನಿಂತಿರುವ ಬೋರ್ ವೆಲ್ ಗಳಿಂದ ಅಯೋಮಯವಾದ ರೈತರ ಬೆಳೆಗಳು ಮತ್ತು ಜೀವನಕ್ಕೆ ಸಂಕಷ್ಟ ಎದುರಾಗಿದೆ.
ಅತೀವ ಉಷ್ಣಾಂಶ ದಿಂದ ಕೂಡಿದ ಬಿಸಿಲ ಬೇಗೆ ತಾಳಲಾರದ ವಯೋವೃದ್ಧರು, ಮಕ್ಕಳು ಮತ್ತು ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ.



ಇಂತಹ ಸಂಕಷ್ಟ ದಲ್ಲಿ ಕಪ್ಪೆಗಳ ಮದುವೆ ಮಾಡಿಸಿದರೆ ಮಳೆಯಾಗುತ್ತದೆ ಎಂಬುದು ತಲೆತಲಾಂತರದಿಂದ ನಡೆದುಕೊಂಡು ಬಂದ ಹಿರಿಯರ ವಾಡಿಕೆ ಮತ್ತು ನಂಬಿಕೆಯಾಗಿದೆ. ಅದರಂತೆ
ಕಪ್ಪೆಗಳಿಗೆ ಮದುವೆ ಮಾಡಿಸಲಾಯಿತು. ಬಳಿಕ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ನಡೆದ ಕಪ್ಪೆಗಳ ಮದುವೆ ಮೆರವಣಿಗೆ ನಡೆಸಲಾಯಿತು. ಗ್ರಾಮದ ಬೀದಿ ಬೀದಿಗಳಲ್ಲಿ ತಮಟೆ ವಾದ್ಯಗಳೊಂದಿಗೆ ಕಪ್ಪೆಗಳ ಮೆರವಣಿಗೆ ಮಾಡಿ ಮಳೆಗಾಗಿ ಮಹಾದೇವನ ಪ್ರಾರ್ಥನೆ ಮಾಡಲಾಯಿತು.
ಮೆರವಣಿಗೆಯಲ್ಲಿ ಉಯ್ಯೊ ಉಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಮಳೆಗಾಗಿ ಗ್ರಾಮಸ್ಥರು ಪ್ರಾರ್ಥನೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು