5:57 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಶ್ವ ಹೋಮಿಯೋಪತಿ ದಿನಾಚರಣೆ

02/05/2024, 14:43

ಮಂಗಳೂರು(reporterkarnataka.com);ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ವಿದ್ಯಾರ್ಥಿಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ ನಡೆಸುವ ಮನೋಭಾವ ಬೆಳೆಸಿಕೊಂಡಾಗ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಸಿಎಜಿ ಇಂಡಿಯಾದ ಸೀನಿಯರ್ ಅಕೌಂಟೆಂಟ್ ಜನರಲ್ ಡಾ. ರಾಹುಲ್ ಪಿ. ಹೇಳಿದರು.


ಹೋಮಿಯೋಪತಿ ಜನಕ ಡಾ. ಸ್ಯಾಮುವೆಲ್ ಹಾನ್ನಿಮನ್ 269ನೇ ಜನ್ಮದಿನದ ಸ್ಮರಣಾರ್ಥ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಆಡಿಟೋರಿಯಂನಲ್ಲಿ ಮಂಗಳವಾರ ಜರಗಿದ ವಿಶ್ವ ಹೋಮಿಯೋಪತಿ ದಿನ -2024 ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಹೊರಜಗತ್ತಿನ ದಾಸ್ಯಗಳಿಗೆ ಬಲಿಯಾಗದೆ, ಜೀವನದ ಯಶಸ್ಸಿನ ಹಾದಿಯಲ್ಲಿ ಮುಂದುವರಿಯಿರಿ, ತನ್ನ ಸಹಪಾಠಿಗಳು ಹೋಮಿಯೋಪತಿಯಲ್ಲಿ ವೃತ್ತಿ ಮುಂದುವರಿಸಿ ಯಶಸ್ಸಿನ ಹಾದಿಯಲ್ಲಿದ್ದಾರೆ. ಯಶಸ್ಸಿಗೆ ವಯಸ್ಸಿನ ವಯೋಮಿತಿಯಲ್ಲ. ನಿರಂತರ ಅಧ್ಯಯನ ನಡೆಸುವವರಾಗಿರಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಮಾತನಾಡಿ, ಹೋಮಿಯೋಪತಿ ಸಂಸ್ಥೆಯಲ್ಲಿ ಅಧ್ಯಯನ ನಡೆಸಿದವರು ವಿವಿಧ ಕ್ಷೇತ್ರಗಳಲ್ಲಿ ಇದ್ದರೂ ಯಶಸ್ಸಿನ ಹಾದಿಯಲ್ಲಿದ್ದಾರೆ ಎಂದರು.
ಹೋಮಿಯೋಪತಿ ದಿನಾಚರಣೆ ಮೂಲಕ ಹಳೆಯ ವಿದ್ಯಾರ್ಥಿಗಳನ್ನು ಹಾಗೂ ಅವರ ವ್ಯಕ್ತಿತ್ವವನ್ನು ಮೆಲುಕು ಹಾಕುವ ಕಾರ್ಯ ಆಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಕೇರಳ ಸರಕಾರದ ಹೋಮಿಯೋಪತಿ ವಿಭಾಗದ ವೈದ್ಯಕೀಯ ಅಧಿಕಾರಿ ಡಾ. ಜೆರಾಲ್ಡ್ ಜಯಕುಮಾರ್ ಮತ್ತು ಡಾ. ಬಿನುರಾಜ್ ಟಿ.ಕೆ. ಜತೆಗೂಡಿ ಹೊರತಂದ ‘ಹೋಮಿಯೋ ಎವಿಡೆನ್ಸ್ ಡಾಟ್‌ಕಾಂ ಎಂಬ ಡಿಜಿಟಲ್ ಡಾಟಾಬೇಸ್ ವೆಬ್‌ಸೈಟ್‌ಗೆ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತಾಧಿಕಾರಿ ಫಾ. ರೋಷನ್ ಕ್ರಾಸ್ತಾ ಬಿಡುಗಡೆಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು