5:33 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

03/05/2024, 01:43

ಹೊಸದಿಲ್ಲಿ(reporterkarnataka.com): ಭಾರತದಲ್ಲಿ ಕೊರೋನ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ನೀಡಲಾಗಿದ ಎರಡು ಲಸಿಕೆಗಳಲ್ಲಿ ಒಂದಾದ ಆಸ್ಟ್ರಾಜೆನೆಕಾ ತಯಾರಿಸಿರುವ ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದಂತೆ ಅಡ್ಡಪರಿಣಾಮ ಬೀರುವ ಸಾಮರ್ಥ್ಯ ಕೋವಿಶೀಲ್ಡ್‌ಗೆ ಇದೆ ಎಂದು ಅದನ್ನು ತಯಾರಿಸಿರುವ ಆಸ್ಟ್ರಾಜೆನೆಕಾ ಲಂಡನ್‌ನ ನ್ಯಾಯಾಲಯದೆದುರು ಒಪ್ಪಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಶಾಲ್‌ ತಿವಾರಿ ಎಂಬುವವರು ಅರ್ಜಿ ದಾಖಲಿಸಿದ್ದಾರೆ.
ತಾನು ತಯಾರಿಸಿದ ಲಸಿಕೆ ಪಡೆದವರಲ್ಲಿ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್‌ನೊಂದಿಗೆ (ಟಿಟಿಎಸ್) ಅಂದರೆ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ ಸಂಖ್ಯೆ ಇಳಿಕೆ ಸಮಸ್ಯೆ ಎದುರಾಗಲಿದೆ ಎಂಬುದನ್ನು ಆಸ್ಟ್ರಾಜೆನೆಕಾ ಒಪ್ಪಿಕೊಂಡಿದೆ ಎಂಬುದಾಗಿ ಅರ್ಜಿ ವಿವರಿಸಿದೆ.
ಕೋವಿಶೀಲ್ಡ್‌ನ ಅಡ್ಡಪರಿಣಾಮಗಳು ಮತ್ತು ಅದರ ಅಪಾಯಕಾರಿ ಅಂಶಗಳನ್ನು ಪರೀಕ್ಷಿಸಲು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ತಜ್ಞರನ್ನೊಳಗೊಂಡ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯ ವೈದ್ಯಕೀಯ ತಜ್ಞರ ಸಮಿತಿಯನ್ನು ಸರ್ವೋಚ್ಚ ನ್ಯಾಯಾಲಯ ರಚಿಸಬೇಕು ಎಂದು ಮನವಿ ಮಾಡಲಾಗಿದೆ.
ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಸರ್ಕಾರ ಈ ಸಮಸ್ಯೆಗೆ ಆದ್ಯತೆಯಿಂದ ಬಗೆಹರಿಸಿದರೆ ಭವಿಷ್ಯದಲ್ಲಿ ಭಾರತೀಯರ ಆರೋಗ್ಯ ಮತ್ತು ಜೀವನಕ್ಕೆ ಅಪಾಯ ಇರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಕೋವಿಡ್ ಲಸಿಕೆಯಿಂದ ತೀವ್ರವಾಗಿ ಅಂಗವಿಕಲರಾದ ಅಥವಾ ಸಾವನ್ನಪ್ಪಿದ ನಾಗರಿಕರಿಗೆ ಪರಿಹಾರ ನೀಡಲು ಲಸಿಕೆ ಹಾನಿ ಪಾವತಿ ವ್ಯವಸ್ಥೆ ರೂಪಿಸಲು ನ್ಯಾಯಾಲಯ ಆದೇಶಿಸಬೇಕು ಎಂದು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು