4:21 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

03/05/2024, 01:43

ಹೊಸದಿಲ್ಲಿ(reporterkarnataka.com): ಭಾರತದಲ್ಲಿ ಕೊರೋನ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ನೀಡಲಾಗಿದ ಎರಡು ಲಸಿಕೆಗಳಲ್ಲಿ ಒಂದಾದ ಆಸ್ಟ್ರಾಜೆನೆಕಾ ತಯಾರಿಸಿರುವ ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದಂತೆ ಅಡ್ಡಪರಿಣಾಮ ಬೀರುವ ಸಾಮರ್ಥ್ಯ ಕೋವಿಶೀಲ್ಡ್‌ಗೆ ಇದೆ ಎಂದು ಅದನ್ನು ತಯಾರಿಸಿರುವ ಆಸ್ಟ್ರಾಜೆನೆಕಾ ಲಂಡನ್‌ನ ನ್ಯಾಯಾಲಯದೆದುರು ಒಪ್ಪಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಶಾಲ್‌ ತಿವಾರಿ ಎಂಬುವವರು ಅರ್ಜಿ ದಾಖಲಿಸಿದ್ದಾರೆ.
ತಾನು ತಯಾರಿಸಿದ ಲಸಿಕೆ ಪಡೆದವರಲ್ಲಿ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್‌ನೊಂದಿಗೆ (ಟಿಟಿಎಸ್) ಅಂದರೆ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ ಸಂಖ್ಯೆ ಇಳಿಕೆ ಸಮಸ್ಯೆ ಎದುರಾಗಲಿದೆ ಎಂಬುದನ್ನು ಆಸ್ಟ್ರಾಜೆನೆಕಾ ಒಪ್ಪಿಕೊಂಡಿದೆ ಎಂಬುದಾಗಿ ಅರ್ಜಿ ವಿವರಿಸಿದೆ.
ಕೋವಿಶೀಲ್ಡ್‌ನ ಅಡ್ಡಪರಿಣಾಮಗಳು ಮತ್ತು ಅದರ ಅಪಾಯಕಾರಿ ಅಂಶಗಳನ್ನು ಪರೀಕ್ಷಿಸಲು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ತಜ್ಞರನ್ನೊಳಗೊಂಡ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯ ವೈದ್ಯಕೀಯ ತಜ್ಞರ ಸಮಿತಿಯನ್ನು ಸರ್ವೋಚ್ಚ ನ್ಯಾಯಾಲಯ ರಚಿಸಬೇಕು ಎಂದು ಮನವಿ ಮಾಡಲಾಗಿದೆ.
ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಸರ್ಕಾರ ಈ ಸಮಸ್ಯೆಗೆ ಆದ್ಯತೆಯಿಂದ ಬಗೆಹರಿಸಿದರೆ ಭವಿಷ್ಯದಲ್ಲಿ ಭಾರತೀಯರ ಆರೋಗ್ಯ ಮತ್ತು ಜೀವನಕ್ಕೆ ಅಪಾಯ ಇರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಕೋವಿಡ್ ಲಸಿಕೆಯಿಂದ ತೀವ್ರವಾಗಿ ಅಂಗವಿಕಲರಾದ ಅಥವಾ ಸಾವನ್ನಪ್ಪಿದ ನಾಗರಿಕರಿಗೆ ಪರಿಹಾರ ನೀಡಲು ಲಸಿಕೆ ಹಾನಿ ಪಾವತಿ ವ್ಯವಸ್ಥೆ ರೂಪಿಸಲು ನ್ಯಾಯಾಲಯ ಆದೇಶಿಸಬೇಕು ಎಂದು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು