6:23 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಸೆಕ್ಸ್ ವೀಡಿಯೊ ಪ್ರಕರಣ: ಜರ್ಮನಿಯಿಂದ ದುಬೈಗೆ ಹಾರಿದ ಪ್ರಜ್ವಲ್‌ ರೇವಣ್ಣ; ಇಂದು ಬೆಂಗಳೂರಿಗೆ ಆಗಮನ?

03/05/2024, 11:18

ಬೆಂಗಳೂರು(reporterkarnataka.com):ಜರ್ಮನಿಗೆ ತೆರಳಿದ್ದ ಅಶ್ಲೀಲ ವೀಡಿಯೊ ಪ್ರಕರಣ ಆರೋಪಿ, ಎನ್ ಡಿಎ ಮೈತ್ರಿಕೂಟದ ಹಾಸನ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಯಿಂದ ದುಬೈಗೆ ತೆರಳಿದ್ದು, ಇಂದು ಅಥವಾ ನಾಳೆ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಸೆಕ್ಸ್ ವೀಡಿಯೊ ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದಂತೆ ಎಚ್ಚೆತ್ತುಕೊಂಡ ಪ್ರಜ್ವಲ್ ಅವರು ಏ. 26ರಂದು ಚುನಾವಣೆ ಮುಗಿಯುತ್ತಿದ್ದಂತೆ ಏ. 27ರಂದು ಮುಂಜಾನೆ 2.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಜರ್ಮನಿಗೆ ತೆರಳಿದ್ದರು. ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದ ಎಸ್ ಐಟಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿತ್ತು. ಪ್ರಜ್ವಲ್ ವಕೀಲರು ವಿಚಾರಣೆಗೆ ಹಾಜರಾಗಲು 7 ದಿನ ಕಾಲಾವಕಾಶ ನೀಡುವಂತೆ ವಿಶೇಷ ತನಿಖಾ ತಂಡದ ಬಳಿ ಮನವಿ ಮಾಡಿದ್ದರು. ಈ ನಡುವೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಚಾರಣೆಗೆ ಹಾಜರಾಗದಿದ್ದರೆ, ಪ್ರಜ್ವಲ್ ಅವರನ್ನು ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇದೀಗ ಪ್ರಜ್ವಲ್‌ ರೇವಣ್ಣ ಬುಧವಾರ ರಾತ್ರಿ
ದುಬೈಗೆ ಬಂದ ಹಿನ್ನೆಲೆಯಲ್ಲಿ ಅಲ್ಲಿಂದ ಅವರು ನೇರವಾಗಿ ಬೆಂಗಳೂರಿಗೆ ಬರುವ ಸಾಧ್ಯತೆ ದಟ್ಟವಾಗಿದೆ.
ಪ್ರಜ್ವಲ್‌ ರೇವಣ್ಣ ಅವರು ರಾಜತಾಂತ್ರಿಕ ಪಾಸ್‌ಪೋರ್ಟ್‌ ಬಳಸಿ ಜರ್ಮನಿಗೆ ತೆರಳಿದ್ದಾರೆ. ಹೀಗಾಗಿ ಕೂಡಲೇ ಈ ಪಾಸ್‌ಪೋರ್ಟ್‌ ರದ್ದುಪಡಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು