3:36 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ

03/05/2024, 11:20

ಕಾಸರಗೋಡು(reporterkarnataka.com): ಮಗಳ ಮದುವೆಯ ಮದಿರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಇತ್ತ ತಂದೆ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕಾಸರಗೋಡು ಸಮೀಪದ ಮುಳ್ಳೇರಿಯಾದಲ್ಲಿ ನಡೆದಿದೆ.
ಮುಳ್ಳೇರಿಯ ಸಮೀಪದ ಕಾರ್ಲೆ ನಿವಾಸಿ ರಾಜ ರಾವ್‌ (51) ಮೃತಪಟ್ಟ ವ್ಯಕ್ತಿ. ರಾಜ ರಾವ್ ಅವರ ಮಗಳ ಮದುವೆ ಮೇ 2ರಂದು ಕರ್ಮಂತೋಡಿಯ ಆಡಿಟೋರಿಯಂನಲ್ಲಿ ನಡೆಯಲಿತ್ತು. ಮದುವೆಯ ಹಿಂದಿನ ದಿನ ಮದರಂಗಿ ಶಾಸ್ತ್ರ ಮನೆಯಲ್ಲಿ ಏರ್ಪಡಿಸಲಾಗಿತ್ತು. ಅದಕ್ಕೆ ಬೇಕಾದ ಸಿದ್ಧತೆಗಳು ನಡೆಯುತ್ತಿದ್ದಂತೆ ರಾಜ ರಾವ್ ಅವರು ತನ್ನ ಸ್ಕೂಟರ್‌ನಲ್ಲಿ ಮನೆಯಿಂದ ತೆರಳಿ ನಾಪತ್ತೆಯಾಗಿದ್ದರು. ಅವರ ಮೊಬೈಲಿಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಲಭಿಸಲಿಲ್ಲ. ಇದರಿಂದ ಹುಡುಕಾಟ ನಡೆಯುತ್ತಿದ್ದಾಗ ಅವರ ಸ್ಕೂಟರ್ ದೇಲಂಪಾಡಿ ಬಳಿ ಪತ್ತೆಯಾಗಿತ್ತು. ನಂತರ ತೀವ್ರ ಹುಡುಕಾಟ ನಡೆಸುತ್ತಿದ್ದಂತೆ ದೇಲಂಪಾಡಿ ಸಮೀಪ ಮರದಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಜಯಲಕ್ಷ್ಮಿ, ಮಕ್ಕಳಾದ ದೀಪ್ತಿ, ದೀಕ್ಷಾ ಅವರನ್ನು ಅಗಲಿದ್ದಾರೆ.
ಆದೂರು ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು