9:45 AM Wednesday30 - July 2025
ಬ್ರೇಕಿಂಗ್ ನ್ಯೂಸ್
Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ

03/05/2024, 11:20

ಕಾಸರಗೋಡು(reporterkarnataka.com): ಮಗಳ ಮದುವೆಯ ಮದಿರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಇತ್ತ ತಂದೆ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕಾಸರಗೋಡು ಸಮೀಪದ ಮುಳ್ಳೇರಿಯಾದಲ್ಲಿ ನಡೆದಿದೆ.
ಮುಳ್ಳೇರಿಯ ಸಮೀಪದ ಕಾರ್ಲೆ ನಿವಾಸಿ ರಾಜ ರಾವ್‌ (51) ಮೃತಪಟ್ಟ ವ್ಯಕ್ತಿ. ರಾಜ ರಾವ್ ಅವರ ಮಗಳ ಮದುವೆ ಮೇ 2ರಂದು ಕರ್ಮಂತೋಡಿಯ ಆಡಿಟೋರಿಯಂನಲ್ಲಿ ನಡೆಯಲಿತ್ತು. ಮದುವೆಯ ಹಿಂದಿನ ದಿನ ಮದರಂಗಿ ಶಾಸ್ತ್ರ ಮನೆಯಲ್ಲಿ ಏರ್ಪಡಿಸಲಾಗಿತ್ತು. ಅದಕ್ಕೆ ಬೇಕಾದ ಸಿದ್ಧತೆಗಳು ನಡೆಯುತ್ತಿದ್ದಂತೆ ರಾಜ ರಾವ್ ಅವರು ತನ್ನ ಸ್ಕೂಟರ್‌ನಲ್ಲಿ ಮನೆಯಿಂದ ತೆರಳಿ ನಾಪತ್ತೆಯಾಗಿದ್ದರು. ಅವರ ಮೊಬೈಲಿಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಲಭಿಸಲಿಲ್ಲ. ಇದರಿಂದ ಹುಡುಕಾಟ ನಡೆಯುತ್ತಿದ್ದಾಗ ಅವರ ಸ್ಕೂಟರ್ ದೇಲಂಪಾಡಿ ಬಳಿ ಪತ್ತೆಯಾಗಿತ್ತು. ನಂತರ ತೀವ್ರ ಹುಡುಕಾಟ ನಡೆಸುತ್ತಿದ್ದಂತೆ ದೇಲಂಪಾಡಿ ಸಮೀಪ ಮರದಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಜಯಲಕ್ಷ್ಮಿ, ಮಕ್ಕಳಾದ ದೀಪ್ತಿ, ದೀಕ್ಷಾ ಅವರನ್ನು ಅಗಲಿದ್ದಾರೆ.
ಆದೂರು ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು