3:38 AM Friday12 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ

03/05/2024, 23:53

ಸುಬ್ರಹ್ಮಣ್ಯ(reporterkarnataka.com); ಕೇವಲ 15 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕರೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ ದಾರುಣ ಘಟನೆ ಸುಬ್ರಹ್ಮಣ್ಯ ಸಮೀಪ ನಡೆದಿದೆ.
ಸುಬ್ರಹ್ಮಣ್ಯ ಗ್ರಾಮದ ಹೊಸೋಳಿಕೆ ಪರ್ವತಮುಖಿ ನಿವಾಸಿ ದಿ ಸಾಂತಪ್ಪ ಗೌಡ ಅವರ ಪುತ್ರ ಸೋಮ ಸುಂದರ್ (34) ಮೃತಪಟ್ಟ ದುರ್ದೈವಿ.
ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಅಂಗಲದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದ ವೇಳೆ ಸೋಮ ಸುಂದರ್ ಅವರಿಗೆ ಸಿಡಿಲು ಬಡಿದಿದೆ. ಮಿಂಚಿತ ಆಘಾತಕ್ಕೆ ಅಸ್ವಸ್ಥಗೊಂಡ ಅವರನ್ನು ತಕ್ಷಣ ಕಡಬದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದುರೂ ಅವರು ಕೊನೆಯುಸಿರೆಳೆದಿದ್ದಾರೆ. ಸೋಮ ಸುಂದರ್ ಅವರು
ಏ 18 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು. ಮೃತರು ಪತ್ನಿ ತಾಯಿ,ತಂಗಿಯನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು