10:55 AM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ…

ಇತ್ತೀಚಿನ ಸುದ್ದಿ

ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ ವೇಳೆ ಮನೆಯಲ್ಲೇ ಇದ್ದ ಮಾಜಿ ಪ್ರಧಾನಿ ದೇವೇಗೌಡರು!

04/05/2024, 21:31

ಬೆಂಗಳೂರು(reporterkarnataka.com): ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೆಲವೇ ನಿಮಿಷಗಳಲ್ಲಿ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ತಂಡ ಬಂಧಿಸಿದೆ.
ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಶನಿವಾರ ತಿರಸ್ಕರಿಸಿ ತಕ್ಷಣ ಎಸ್ ಐಟಿ ತಂಡ ರೇವಣ್ಣ ಅವರ
ತಂದೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಆಗಮಿಸಿದೆ. ಆಗ ಸಮಯ ಸಂಜೆ 6.45ಕ್ಕೆ ಆಗಿತ್ತು. ರೇವಣ್ಣ ಅವರು ಮಾಜಿ ಪ್ರಧಾನಿ ನಿವಾಸದಲ್ಲಿ ಅಡಗಿಕೊಂಡಿದ್ದಾರೆ ಎಂಬ ಗುಪ್ತಚರ ಮಾಹಿತಿ ಪಡೆದ ಎಸ್‌ಐಟಿ ತಂಡ ಆಗಮಿಸಿತ್ತು.
ಆದರೆ,ಪದ್ಮನಾಭನಗರದ ದೇವೇಗೌಡರ ನಿವಾಸದ ಗೇಟ್‌ ಎಸ್ ಐಟಿ ತಂಡಕ್ಕೆ ತೆರೆಯಲಿಲ್ಲ. ಇನ್ನೇನು ಎಸ್ ಐಟಿ ತಂಡ ಒಳನುಗ್ಗಬೇಕೆನ್ನುವಷ್ಟರಲ್ಲಿ ರೇವಣ್ಣ ಅವರು ಮನೆಯ ಗೇಟು ತೆರೆದು ಹೊರನಡೆದು ಶರಣಾದರು ಎಂದು ಮೂಲಗಳು ತಿಳಿಸಿವೆ.
ಮನೆಯ ಗೇಟ್‌ನ ಹೊರಗೆ ಕೆಲ ಹೊತ್ತು ಹೈ ಡ್ರಾಮಾವೇ ನಡೆಯಿತು. ಮಾಜಿ ಪ್ರಧಾನಿ ದೇವೇಗೌಡರು ಮನೆಯಲ್ಲಿದ್ದರು ಎಂದು ಮೂಲಗಳು ಖಚಿತಪಡಿಸಿವೆ. ರೇವಣ್ಣ ಅವರನ್ನು ನಗರದ ಸಿಐಡಿ ಕೇಂದ್ರ ಕಚೇರಿಯಲ್ಲಿರುವ ಎಸ್‌ಐಟಿ ಕಚೇರಿಗೆ ಕರೆದೊಯ್ಯಲಾಯಿತು.
ರೇವಣ್ಣ ಅವರ ವಿರುದ್ಧ ಮೈಸೂರು ಜಿಲ್ಲೆಯ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಮೇ 2 ರಂದು ದಾಖಲಿಸಲಾದ ಅಪಹರಣ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ. ಆಕೆ ಅವರ ಪುತ್ರ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಕ್ಕೆ ಬಲಿಯಾದರು ಎಂದು ಆರೋಪಿಸಲಾಗಿದೆ.
ಏಪ್ರಿಲ್ 29 ರ ರಾತ್ರಿ ರೇವಣ್ಣ ಅವರ ಆದೇಶದ ಮೇರೆಗೆ ತನ್ನ ಮಗನ ವಿರುದ್ಧ ಸಾಕ್ಷಿ ಹೇಳುವುದನ್ನು ತಡೆಯಲು ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆಯ ಪುತ್ರ ರೇವಣ್ಣ ಮತ್ತು ಅವರ ಆಪ್ತ ಸತೀಶ್ ಬಾಬು ವಿರುದ್ಧ ನಗರ ಪೊಲೀಸರು ಎಫ್ಐಆರ್ ದಾಖಲಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು