5:28 AM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ ವೇಳೆ ಮನೆಯಲ್ಲೇ ಇದ್ದ ಮಾಜಿ ಪ್ರಧಾನಿ ದೇವೇಗೌಡರು!

04/05/2024, 21:31

ಬೆಂಗಳೂರು(reporterkarnataka.com): ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೆಲವೇ ನಿಮಿಷಗಳಲ್ಲಿ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ತಂಡ ಬಂಧಿಸಿದೆ.
ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಶನಿವಾರ ತಿರಸ್ಕರಿಸಿ ತಕ್ಷಣ ಎಸ್ ಐಟಿ ತಂಡ ರೇವಣ್ಣ ಅವರ
ತಂದೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಆಗಮಿಸಿದೆ. ಆಗ ಸಮಯ ಸಂಜೆ 6.45ಕ್ಕೆ ಆಗಿತ್ತು. ರೇವಣ್ಣ ಅವರು ಮಾಜಿ ಪ್ರಧಾನಿ ನಿವಾಸದಲ್ಲಿ ಅಡಗಿಕೊಂಡಿದ್ದಾರೆ ಎಂಬ ಗುಪ್ತಚರ ಮಾಹಿತಿ ಪಡೆದ ಎಸ್‌ಐಟಿ ತಂಡ ಆಗಮಿಸಿತ್ತು.
ಆದರೆ,ಪದ್ಮನಾಭನಗರದ ದೇವೇಗೌಡರ ನಿವಾಸದ ಗೇಟ್‌ ಎಸ್ ಐಟಿ ತಂಡಕ್ಕೆ ತೆರೆಯಲಿಲ್ಲ. ಇನ್ನೇನು ಎಸ್ ಐಟಿ ತಂಡ ಒಳನುಗ್ಗಬೇಕೆನ್ನುವಷ್ಟರಲ್ಲಿ ರೇವಣ್ಣ ಅವರು ಮನೆಯ ಗೇಟು ತೆರೆದು ಹೊರನಡೆದು ಶರಣಾದರು ಎಂದು ಮೂಲಗಳು ತಿಳಿಸಿವೆ.
ಮನೆಯ ಗೇಟ್‌ನ ಹೊರಗೆ ಕೆಲ ಹೊತ್ತು ಹೈ ಡ್ರಾಮಾವೇ ನಡೆಯಿತು. ಮಾಜಿ ಪ್ರಧಾನಿ ದೇವೇಗೌಡರು ಮನೆಯಲ್ಲಿದ್ದರು ಎಂದು ಮೂಲಗಳು ಖಚಿತಪಡಿಸಿವೆ. ರೇವಣ್ಣ ಅವರನ್ನು ನಗರದ ಸಿಐಡಿ ಕೇಂದ್ರ ಕಚೇರಿಯಲ್ಲಿರುವ ಎಸ್‌ಐಟಿ ಕಚೇರಿಗೆ ಕರೆದೊಯ್ಯಲಾಯಿತು.
ರೇವಣ್ಣ ಅವರ ವಿರುದ್ಧ ಮೈಸೂರು ಜಿಲ್ಲೆಯ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಮೇ 2 ರಂದು ದಾಖಲಿಸಲಾದ ಅಪಹರಣ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ. ಆಕೆ ಅವರ ಪುತ್ರ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಕ್ಕೆ ಬಲಿಯಾದರು ಎಂದು ಆರೋಪಿಸಲಾಗಿದೆ.
ಏಪ್ರಿಲ್ 29 ರ ರಾತ್ರಿ ರೇವಣ್ಣ ಅವರ ಆದೇಶದ ಮೇರೆಗೆ ತನ್ನ ಮಗನ ವಿರುದ್ಧ ಸಾಕ್ಷಿ ಹೇಳುವುದನ್ನು ತಡೆಯಲು ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆಯ ಪುತ್ರ ರೇವಣ್ಣ ಮತ್ತು ಅವರ ಆಪ್ತ ಸತೀಶ್ ಬಾಬು ವಿರುದ್ಧ ನಗರ ಪೊಲೀಸರು ಎಫ್ಐಆರ್ ದಾಖಲಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು