12:23 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ ವೇಳೆ ಮನೆಯಲ್ಲೇ ಇದ್ದ ಮಾಜಿ ಪ್ರಧಾನಿ ದೇವೇಗೌಡರು!

04/05/2024, 21:31

ಬೆಂಗಳೂರು(reporterkarnataka.com): ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೆಲವೇ ನಿಮಿಷಗಳಲ್ಲಿ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ತಂಡ ಬಂಧಿಸಿದೆ.
ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಶನಿವಾರ ತಿರಸ್ಕರಿಸಿ ತಕ್ಷಣ ಎಸ್ ಐಟಿ ತಂಡ ರೇವಣ್ಣ ಅವರ
ತಂದೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಆಗಮಿಸಿದೆ. ಆಗ ಸಮಯ ಸಂಜೆ 6.45ಕ್ಕೆ ಆಗಿತ್ತು. ರೇವಣ್ಣ ಅವರು ಮಾಜಿ ಪ್ರಧಾನಿ ನಿವಾಸದಲ್ಲಿ ಅಡಗಿಕೊಂಡಿದ್ದಾರೆ ಎಂಬ ಗುಪ್ತಚರ ಮಾಹಿತಿ ಪಡೆದ ಎಸ್‌ಐಟಿ ತಂಡ ಆಗಮಿಸಿತ್ತು.
ಆದರೆ,ಪದ್ಮನಾಭನಗರದ ದೇವೇಗೌಡರ ನಿವಾಸದ ಗೇಟ್‌ ಎಸ್ ಐಟಿ ತಂಡಕ್ಕೆ ತೆರೆಯಲಿಲ್ಲ. ಇನ್ನೇನು ಎಸ್ ಐಟಿ ತಂಡ ಒಳನುಗ್ಗಬೇಕೆನ್ನುವಷ್ಟರಲ್ಲಿ ರೇವಣ್ಣ ಅವರು ಮನೆಯ ಗೇಟು ತೆರೆದು ಹೊರನಡೆದು ಶರಣಾದರು ಎಂದು ಮೂಲಗಳು ತಿಳಿಸಿವೆ.
ಮನೆಯ ಗೇಟ್‌ನ ಹೊರಗೆ ಕೆಲ ಹೊತ್ತು ಹೈ ಡ್ರಾಮಾವೇ ನಡೆಯಿತು. ಮಾಜಿ ಪ್ರಧಾನಿ ದೇವೇಗೌಡರು ಮನೆಯಲ್ಲಿದ್ದರು ಎಂದು ಮೂಲಗಳು ಖಚಿತಪಡಿಸಿವೆ. ರೇವಣ್ಣ ಅವರನ್ನು ನಗರದ ಸಿಐಡಿ ಕೇಂದ್ರ ಕಚೇರಿಯಲ್ಲಿರುವ ಎಸ್‌ಐಟಿ ಕಚೇರಿಗೆ ಕರೆದೊಯ್ಯಲಾಯಿತು.
ರೇವಣ್ಣ ಅವರ ವಿರುದ್ಧ ಮೈಸೂರು ಜಿಲ್ಲೆಯ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಮೇ 2 ರಂದು ದಾಖಲಿಸಲಾದ ಅಪಹರಣ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ. ಆಕೆ ಅವರ ಪುತ್ರ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಕ್ಕೆ ಬಲಿಯಾದರು ಎಂದು ಆರೋಪಿಸಲಾಗಿದೆ.
ಏಪ್ರಿಲ್ 29 ರ ರಾತ್ರಿ ರೇವಣ್ಣ ಅವರ ಆದೇಶದ ಮೇರೆಗೆ ತನ್ನ ಮಗನ ವಿರುದ್ಧ ಸಾಕ್ಷಿ ಹೇಳುವುದನ್ನು ತಡೆಯಲು ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆಯ ಪುತ್ರ ರೇವಣ್ಣ ಮತ್ತು ಅವರ ಆಪ್ತ ಸತೀಶ್ ಬಾಬು ವಿರುದ್ಧ ನಗರ ಪೊಲೀಸರು ಎಫ್ಐಆರ್ ದಾಖಲಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು