1:26 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ದೊಂದಿ ಬೆಳಕಿನಲ್ಲಿ ಮಂತ್ರದೇವತೆ ಕೋಲ: ಭಕ್ತಿಯ ಪರಾಕಾಷ್ಠೆಗೆ ಏರಿಸಿದ ಮಾಬೆಟ್ಟು ವಿಶ್ವನಾಥ ಶೆಟ್ರರ ದೈವಾರಾಧನೆ

04/05/2024, 21:54

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಇತ್ತೀಚಿಗಿನ‌ ದಿನಗಳಲ್ಲಿ ನಡೆಯುತ್ತಿರುವ ಅಬ್ಬರದ ಕೋಲ,ನೇಮ ಮುಂತಾದ ದೈವಕಾರ್ಯಗಳ ನಡುವೆ ಇಲ್ಲೊಂದು ಕಡೆ ಸಾಂಪ್ರದಾಯಿಕವಾಗಿ ದೊಂದಿ ದೀಪದ ಬೆಳಕಿನಲ್ಲಿ ಮಂತ್ರದೇವತೆಯ ಕೋಲ‌ ನಡೆಸಿ ಎಲ್ಲರನ್ನೂ ಭಕ್ತಿಯ ಪರಾಕಾಷ್ಠೆಗೆ ಒಯ್ಯುವಲ್ಲಿ ಯಶಸ್ವಿಯಾಗಿದೆ.


ಇದು ನಡೆದಿರುವುದು ತುಳುನಾಡಿನ ಬಂಟ್ವಾಳ ತಾಲೂಕಿನ ರಾಯಿ ಎಂಬ ಪುಟ್ಟ ಊರಿನಲ್ಲಿ.
ಆಧುನಿಕ ಯುಗದಲ್ಲಿ ಎಲ್ಲವೂ ಬದಲಾಗುತ್ತಿದ್ದರೂ ತುಳುನಾಡಿನ ದೈವಾರಾಧನೆ ಇಂದಿಗೂ ಮೂಲ‌ ಸ್ವರೂಪವನ್ನು ಉಳಿಸಿಕೊಂಡಿದೆ. ಆದರೆ ಕೆಲವೊಂದು ಕಡೆಗಳಲ್ಲಿ ಮಿತಿ ಮೀರಿದ ಅಬ್ಬರ, ಅಲಂಕಾರ ನಡೆದು ಭಕ್ತಿಗಿಂತ ಆಡಂಬರ- ಸಡಗರವೇ ಹೆಚ್ಚಾಗಿ ಎದ್ದು ಕಾಣುತ್ತದೆ. ಇಂತಹ ಸಂದರ್ಭದಲ್ಲಿ ಆಡಂಬರಕ್ಕೆ ಅಪವಾದ ಎಂಬ ರೀತಿಯಲ್ಲಿ ಬಂಟ್ವಾಳದ ರಾಯಿ ಎಂಬಲ್ಲಿ ದೈವಾರಾಧನೆ ನಡೆಸಲಾಗಿದೆ. ಸಾಂಪ್ರದಾಯ ಬದ್ಧವಾಗಿ ಮಂತ್ರದೇವತೆಯ ಕೋಲ ನಡೆದಿದೆ.ದೊಂದಿಯ ಬೆಳಕಿನಲ್ಲಿ ಮಂತ್ರದೇವತೆಯ ಕೋಲ‌ ನಡೆಸಲಾಗಿದೆ.
ಬಂಟ್ವಾಳದ ರಾಯಿ ಮಾಬೆಟ್ಟು ವಿಶ್ವನಾಥ ಶೆಟ್ಟಿ ಅವರ ಮನೆಯಲ್ಲಿ ಈ ಕೋಲ ನಡೆದಿದೆ.ದೊಂದಿ ಹಾಗೂ ದೀವಟಿಗೆಯ ಬೆಳಕಿನಲ್ಲಿ ಮಂತ್ರದೇವತೆ ಮಾಯದಿಂದ ಜೋಗದ ರೂಪಕ್ಕೆ ಇಳಿದು ನಂಬಿದವರಿಗೆ ತನ್ನ ವೈಭವವನ್ನು ತೋರಿಸಿದೆ. ಸಿರಿಸಿಂಗಾರದ ಸೇವೆಯನ್ನು ಪಡೆದು ಪ್ರಸನ್ನಳಾದ ಮಂತ್ರದೇವತೆಯ ಅಬ್ಬರ ದೀವಟಿಗೆಯ ಬೆಳಕಿನಲ್ಲಿ ಬೇರೆ ಲೋಕವನ್ನೇ ಧರೆಗಿಳಿಸುವಂತೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು