3:23 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ವಿಶ್ವಕರ್ಮ ಸಮಾಜಕ್ಕೆ ಅವಮಾನ ಮಾಡುವಂತಹ ವಿಡಿಯೋ ಶೇರ್ ಮಾಡಿದ ಮಹಿಳೆ : ದೂರು ನೀಡಿದ ವಿವಿಧ ವಿಶ್ವಕರ್ಮ ಸಂಘಟನೆಗಳು

16/08/2021, 14:43

ಮಂಗಳೂರು(Reporterkarnataka.com)

ವಿಶ್ವಕರ್ಮ ಸಮಾಜದ ಮರದ ಕೆಲಸ ಮಾಡುವವರನ್ನು ಅವಹೇಳನ‌ ಮಾಡುವ ರೀತಿಯಲ್ಲಿ “ಕೆಲಸ ದಾಂತಿನ ಆಚಾರಿ ಬಾಲೆದ *** ಕೆತ್ತಿಯೆ” ಎನ್ನುವ ಮಾತನ್ನು ಅಳವಡಿಸಿದ ವಿಡಿಯೋ ತಯಾರಿಸಿ ಮಂಗಳೂರು ಸುರತ್ಕಲ್‌ನ ಸುಷ್ಮಾ ಎನ್ನುವವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದು, ಆದ್ದರಿಂದ ಸಮುದಾಯಕ್ಕೆ ಮಾನಸಿಕವಾಗಿ ಹಾಗೂ ಸಾಮಾಜಿಕವಾಗಿ ಅವಮಾನ ಉಂಟಾಗಿದೆ ಎಂದು ಮೂಡಬಿದ್ರಿ ವಿಶ್ವಕರ್ಮ ಜಾಗೃತದಳ ಮೂಡಬಿದ್ರಿ ಪೋಲಿಸ್ ಠಾಣೆಗೆ ದೂರು ನೀಡಿದೆ.

ಸೋಷಿಯಲ್ ಮಿಡಿಯಾ (Instrgram) ಪೇಜ್‌ನಲ್ಲಿ ವಿಶ್ವಕರ್ಮ ಸಮಾಜವನ್ನು ದುರ್ಬಳಕೆ ಮಾಡಿ ಜಾತಿ ನಿಂದನೆ ಮಾಡಿದ ಅರೋಪದಡಿ ಸುರತ್ಕಲ್ ಕ್ರಷ್ಣಾಪುರ ನಿವಾಸಿ “ಸುಷ್ಮಾ” ಎಂಬವರ ವಿರುದ್ಧ ಕಾನೂನು ರೀತಿಯಲ್ಲಿ ಶಿಕ್ಷೆಯಾಗಬೇಕೆಂದು ಮೂಡುಬಿದಿರೆ ವಿಶ್ವಕರ್ಮ ಜಾಗ್ರತದಳ , ಶ್ರೀ ಕಾಳಿಕಾಂಬಾ ಸೇವಾ ಸಮಿತಿ , ಕಾಷ್ಠ ಶಿಲ್ಪ , ಚಿನ್ನದ ಕೆಲಸಗಾರರ ಸಂಘ ದೂರಿನಲ್ಲಿ ತಿಳಿಸಿದೆ.

ವಿಶ್ವಕರ್ಮ ಒಕ್ಕೂಟದ ವತಿಯಿಂದ ಉಡುಪಿ ಸೆನ್ ಪೋಲಿಸ್ ಠಾಣೆಯಲ್ಲಿ ಸುಷ್ಮಾ ಮಯ್ಯ ವಿರುದ್ಧ ದೂರು ದಾಖಲಿಸಲಾಯ್ತು. ಈ ಸಂದರ್ಭದಲ್ಲಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಮಧು ಆಚಾರ್ಯ, ಪ್ರಧಾನ ಕಾರ್ಯದರ್ಶಿ ಮುರಳೀಧರ, ಅಲೆವೂರು ಯೋಗೀಶ ಆಚಾರ್, ಸತೀಶ್ ಆಚಾರ್ಯ ಪಡುಬಿದ್ರಿ,ಕಾಪು ವಿಶ್ವಕರ್ಮ ಯುವ ಸಂಘಟನೆ ಅಧ್ಯಕ್ಷರಾದ ಬಿಳಿಯಾರು ಸುಧಾಕರ ಆಚಾರ್ಯ, ಕಾರ್ಯದರ್ಶಿ ರತ್ನಾಕರ ಆಚಾರ್ಯ, ಹರೀಶ ಆಚಾರ್ಯ ಕಳತ್ತೂರು, ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಕಿಶೋರ್ ಆಚಾರ್ಯ, ವಿಶ್ವನಾಥ ಆಚಾರ್ಯ ಕಿದಿಯೂರು, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು