5:09 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ವಿಶ್ವಕರ್ಮ ಸಮಾಜಕ್ಕೆ ಅವಮಾನ ಮಾಡುವಂತಹ ವಿಡಿಯೋ ಶೇರ್ ಮಾಡಿದ ಮಹಿಳೆ : ದೂರು ನೀಡಿದ ವಿವಿಧ ವಿಶ್ವಕರ್ಮ ಸಂಘಟನೆಗಳು

16/08/2021, 14:43

ಮಂಗಳೂರು(Reporterkarnataka.com)

ವಿಶ್ವಕರ್ಮ ಸಮಾಜದ ಮರದ ಕೆಲಸ ಮಾಡುವವರನ್ನು ಅವಹೇಳನ‌ ಮಾಡುವ ರೀತಿಯಲ್ಲಿ “ಕೆಲಸ ದಾಂತಿನ ಆಚಾರಿ ಬಾಲೆದ *** ಕೆತ್ತಿಯೆ” ಎನ್ನುವ ಮಾತನ್ನು ಅಳವಡಿಸಿದ ವಿಡಿಯೋ ತಯಾರಿಸಿ ಮಂಗಳೂರು ಸುರತ್ಕಲ್‌ನ ಸುಷ್ಮಾ ಎನ್ನುವವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದು, ಆದ್ದರಿಂದ ಸಮುದಾಯಕ್ಕೆ ಮಾನಸಿಕವಾಗಿ ಹಾಗೂ ಸಾಮಾಜಿಕವಾಗಿ ಅವಮಾನ ಉಂಟಾಗಿದೆ ಎಂದು ಮೂಡಬಿದ್ರಿ ವಿಶ್ವಕರ್ಮ ಜಾಗೃತದಳ ಮೂಡಬಿದ್ರಿ ಪೋಲಿಸ್ ಠಾಣೆಗೆ ದೂರು ನೀಡಿದೆ.

ಸೋಷಿಯಲ್ ಮಿಡಿಯಾ (Instrgram) ಪೇಜ್‌ನಲ್ಲಿ ವಿಶ್ವಕರ್ಮ ಸಮಾಜವನ್ನು ದುರ್ಬಳಕೆ ಮಾಡಿ ಜಾತಿ ನಿಂದನೆ ಮಾಡಿದ ಅರೋಪದಡಿ ಸುರತ್ಕಲ್ ಕ್ರಷ್ಣಾಪುರ ನಿವಾಸಿ “ಸುಷ್ಮಾ” ಎಂಬವರ ವಿರುದ್ಧ ಕಾನೂನು ರೀತಿಯಲ್ಲಿ ಶಿಕ್ಷೆಯಾಗಬೇಕೆಂದು ಮೂಡುಬಿದಿರೆ ವಿಶ್ವಕರ್ಮ ಜಾಗ್ರತದಳ , ಶ್ರೀ ಕಾಳಿಕಾಂಬಾ ಸೇವಾ ಸಮಿತಿ , ಕಾಷ್ಠ ಶಿಲ್ಪ , ಚಿನ್ನದ ಕೆಲಸಗಾರರ ಸಂಘ ದೂರಿನಲ್ಲಿ ತಿಳಿಸಿದೆ.

ವಿಶ್ವಕರ್ಮ ಒಕ್ಕೂಟದ ವತಿಯಿಂದ ಉಡುಪಿ ಸೆನ್ ಪೋಲಿಸ್ ಠಾಣೆಯಲ್ಲಿ ಸುಷ್ಮಾ ಮಯ್ಯ ವಿರುದ್ಧ ದೂರು ದಾಖಲಿಸಲಾಯ್ತು. ಈ ಸಂದರ್ಭದಲ್ಲಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಮಧು ಆಚಾರ್ಯ, ಪ್ರಧಾನ ಕಾರ್ಯದರ್ಶಿ ಮುರಳೀಧರ, ಅಲೆವೂರು ಯೋಗೀಶ ಆಚಾರ್, ಸತೀಶ್ ಆಚಾರ್ಯ ಪಡುಬಿದ್ರಿ,ಕಾಪು ವಿಶ್ವಕರ್ಮ ಯುವ ಸಂಘಟನೆ ಅಧ್ಯಕ್ಷರಾದ ಬಿಳಿಯಾರು ಸುಧಾಕರ ಆಚಾರ್ಯ, ಕಾರ್ಯದರ್ಶಿ ರತ್ನಾಕರ ಆಚಾರ್ಯ, ಹರೀಶ ಆಚಾರ್ಯ ಕಳತ್ತೂರು, ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಕಿಶೋರ್ ಆಚಾರ್ಯ, ವಿಶ್ವನಾಥ ಆಚಾರ್ಯ ಕಿದಿಯೂರು, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು