8:16 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ವಿಶ್ವಕರ್ಮ ಸಮಾಜಕ್ಕೆ ಅವಮಾನ ಮಾಡುವಂತಹ ವಿಡಿಯೋ ಶೇರ್ ಮಾಡಿದ ಮಹಿಳೆ : ದೂರು ನೀಡಿದ ವಿವಿಧ ವಿಶ್ವಕರ್ಮ ಸಂಘಟನೆಗಳು

16/08/2021, 14:43

ಮಂಗಳೂರು(Reporterkarnataka.com)

ವಿಶ್ವಕರ್ಮ ಸಮಾಜದ ಮರದ ಕೆಲಸ ಮಾಡುವವರನ್ನು ಅವಹೇಳನ‌ ಮಾಡುವ ರೀತಿಯಲ್ಲಿ “ಕೆಲಸ ದಾಂತಿನ ಆಚಾರಿ ಬಾಲೆದ *** ಕೆತ್ತಿಯೆ” ಎನ್ನುವ ಮಾತನ್ನು ಅಳವಡಿಸಿದ ವಿಡಿಯೋ ತಯಾರಿಸಿ ಮಂಗಳೂರು ಸುರತ್ಕಲ್‌ನ ಸುಷ್ಮಾ ಎನ್ನುವವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದು, ಆದ್ದರಿಂದ ಸಮುದಾಯಕ್ಕೆ ಮಾನಸಿಕವಾಗಿ ಹಾಗೂ ಸಾಮಾಜಿಕವಾಗಿ ಅವಮಾನ ಉಂಟಾಗಿದೆ ಎಂದು ಮೂಡಬಿದ್ರಿ ವಿಶ್ವಕರ್ಮ ಜಾಗೃತದಳ ಮೂಡಬಿದ್ರಿ ಪೋಲಿಸ್ ಠಾಣೆಗೆ ದೂರು ನೀಡಿದೆ.

ಸೋಷಿಯಲ್ ಮಿಡಿಯಾ (Instrgram) ಪೇಜ್‌ನಲ್ಲಿ ವಿಶ್ವಕರ್ಮ ಸಮಾಜವನ್ನು ದುರ್ಬಳಕೆ ಮಾಡಿ ಜಾತಿ ನಿಂದನೆ ಮಾಡಿದ ಅರೋಪದಡಿ ಸುರತ್ಕಲ್ ಕ್ರಷ್ಣಾಪುರ ನಿವಾಸಿ “ಸುಷ್ಮಾ” ಎಂಬವರ ವಿರುದ್ಧ ಕಾನೂನು ರೀತಿಯಲ್ಲಿ ಶಿಕ್ಷೆಯಾಗಬೇಕೆಂದು ಮೂಡುಬಿದಿರೆ ವಿಶ್ವಕರ್ಮ ಜಾಗ್ರತದಳ , ಶ್ರೀ ಕಾಳಿಕಾಂಬಾ ಸೇವಾ ಸಮಿತಿ , ಕಾಷ್ಠ ಶಿಲ್ಪ , ಚಿನ್ನದ ಕೆಲಸಗಾರರ ಸಂಘ ದೂರಿನಲ್ಲಿ ತಿಳಿಸಿದೆ.

ವಿಶ್ವಕರ್ಮ ಒಕ್ಕೂಟದ ವತಿಯಿಂದ ಉಡುಪಿ ಸೆನ್ ಪೋಲಿಸ್ ಠಾಣೆಯಲ್ಲಿ ಸುಷ್ಮಾ ಮಯ್ಯ ವಿರುದ್ಧ ದೂರು ದಾಖಲಿಸಲಾಯ್ತು. ಈ ಸಂದರ್ಭದಲ್ಲಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಮಧು ಆಚಾರ್ಯ, ಪ್ರಧಾನ ಕಾರ್ಯದರ್ಶಿ ಮುರಳೀಧರ, ಅಲೆವೂರು ಯೋಗೀಶ ಆಚಾರ್, ಸತೀಶ್ ಆಚಾರ್ಯ ಪಡುಬಿದ್ರಿ,ಕಾಪು ವಿಶ್ವಕರ್ಮ ಯುವ ಸಂಘಟನೆ ಅಧ್ಯಕ್ಷರಾದ ಬಿಳಿಯಾರು ಸುಧಾಕರ ಆಚಾರ್ಯ, ಕಾರ್ಯದರ್ಶಿ ರತ್ನಾಕರ ಆಚಾರ್ಯ, ಹರೀಶ ಆಚಾರ್ಯ ಕಳತ್ತೂರು, ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಕಿಶೋರ್ ಆಚಾರ್ಯ, ವಿಶ್ವನಾಥ ಆಚಾರ್ಯ ಕಿದಿಯೂರು, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು