8:38 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ 10 ಮಂದಿ ಮಕ್ಕಳಿಗೆ ಪ್ರಥಮ ಪರಮ ಪ್ರಸಾದ: ಹೆತ್ತವರ ಸಮಕ್ಷಮದಲ್ಲಿ ಪವಿತ್ರ ವಿಧಿವಿಧಾನ

05/05/2024, 19:35

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ 10 ಮಂದಿ ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ನೀಡುವ ಸಮಾರಂಭ ಭಾನುವಾರ ನಡೆಯಿತು.
ಚರ್ಚಿನ ಧರ್ಮ ಗುರು ರೆ. ಫಾ. ಅಲ್ಬನ್ ಡಿ ಸೋಜಾ ಅವರು ಬಲಿಪೂಜೆಯ ಸಂದರ್ಭದಲ್ಲಿ ಪ್ರಥಮ ಪರಮ ಪ್ರಸಾದ ನೀಡುವ ಕಾರ್ಯಕ್ರಮವನ್ನು ನೆರವೇರಿಸಿದರು.
ಮಕ್ಕಳಾದ ಆಲ್ಡನ್ ವೇಗಸ್, ರೆಯಾನ್ ಮೊಂತೇರೊ, ಡಾಲ್ಟನ್ ಪಿಂಟೊ, ಜೇಶ್ಮಾ ಡಿ ಕುನ್ಹಾ, ಲಿಯೋನ್ ಗಾಮಾ, ಮೇಲಿಶಾ ಕ್ರಾಸ್ತಾ, ರೇನಿಯಲ್ ಡಿ ಸೋಜಾ, ರಿಶಾಲ್ ಮಸ್ಕರೇನ್ಹಸ್, ವಿಯಾನ್ನಿ ಫೊನ್ಸೇಕಾ, ಮಿಕಾಯಿಲ್ ಕ್ರಾಸ್ತಾ ಸೇರಿದಂತೆ 10 ಮಂದಿ ಮಕ್ಕಳು ತಮ್ಮ ಹೆತ್ತವರ ಸಮಕ್ಷಮ ಪರಮ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬಲಿಪೂಜೆಯಲ್ಲಿ ರೆ.ಫಾ. ಡೆರಿಲ್ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಹಾಗೂ ಮಕ್ಕಳಿಗೆ ಧಾರ್ಮಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ನೀಡಿದ ಶಿಕ್ಷಕಿ ಲಿಝೀ ಫೆರ್ನಾಂಡಿಸ್, ಸಹಾಯಕ ಶಿಕ್ಷಕಿ ರೆನಿಟಾ ಟೆಲ್ಲಿಸ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು