2:40 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಮತದಾನ: ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಮೊದಲ ಬಾರಿಗೆ ಪ್ರತಿಕ್ರಿಯೆ

07/05/2024, 11:38

ಅಹಮದಾಬಾದ್(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್​ನ ಅಹಮದಾಬಾದ್​ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇಂದು ಮತದಾನ ಮಾಡಿದರು. ಮತದಾನ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.


ಲೋಕಸಭೆ ಚುನಾವಣೆಗೆ ದೇಶದ 3ನೇ ಹಂತದಲ್ಲಿ ರಾಜ್ಯದ 2ನೇ ಹಂತದ ಮತದಾನ ಇಂದು ನಡೆಯುತ್ತಿದೆ. ಪ್ರಧಾನಿ ಮೋದಿ ಅವರ ಜತೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಆಗಮಿಸಿದರು.
ಪ್ರಧಾನಿ ಮೋದಿ ಅವರು ಬರುತ್ತಿದ್ದಂತೆ ಮತಗಟ್ಟೆ ಬಳಿ ನೆರದಿದ್ದ ಜನರು ಮೋದಿ ಮೋದಿ ಅಂತ ಕೂಗಲು ಆರಂಭಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಮತದಾನ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿ. ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕು.
ಮತದಾನ ಅನ್ನೋದು ಸಾಮಾನ್ಯ ದಾನ ಅಲ್ಲ, ಶ್ರೇಷ್ಠ ದಾನಗಳಲ್ಲಿ ಒಂದು ಎಂದು ಹೇಳಿದರು.
ಮತದಾರರ ಸಕ್ರಿಯ ಭಾಗಿತ್ವ ಚುನಾವಣೆಯನ್ನು ಮತ್ತಷ್ಟು ರೋಮಾಂಚನಗೊಳಿಸುತ್ತೆ. ಮತದಾನದ ವೇಳೆ ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ.
ಬಿಸಿಲಿನ ತಾಪ ಹೆಚ್ಚಿದ್ದು ಮತದಾರರು ಹೆಚ್ಚು ನೀರು ಕುಡಿದು ದಣಿವಾರಿಸಿಕೊಳ್ಳಿ ಎಂದು ಪ್ರಧಾನಿ ನುಡಿದರು.
ಮಾಧ್ಯಮ ಪ್ರತಿನಿಧಿಗಳು ಹಗಲು-ರಾತ್ರಿ ಎನ್ನದೆ ಸುದ್ದಿ ಪ್ರಸಾರ ಮಾಡುತ್ತೀರಿ. ಬಿಸಿಲು ಜಾಸ್ತಿ ಇದೆ, ನಿಮ್ಮ ಆರೋಗ್ಯದ ಬಗ್ಗೆ ಲಕ್ಷ ವಹಿಸಿ. ನೀರು ಜಾಸ್ತಿ ಕುಡಿಯಿರಿ ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು