9:34 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಮತದಾನ: ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಮೊದಲ ಬಾರಿಗೆ ಪ್ರತಿಕ್ರಿಯೆ

07/05/2024, 11:38

ಅಹಮದಾಬಾದ್(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್​ನ ಅಹಮದಾಬಾದ್​ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇಂದು ಮತದಾನ ಮಾಡಿದರು. ಮತದಾನ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.


ಲೋಕಸಭೆ ಚುನಾವಣೆಗೆ ದೇಶದ 3ನೇ ಹಂತದಲ್ಲಿ ರಾಜ್ಯದ 2ನೇ ಹಂತದ ಮತದಾನ ಇಂದು ನಡೆಯುತ್ತಿದೆ. ಪ್ರಧಾನಿ ಮೋದಿ ಅವರ ಜತೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಆಗಮಿಸಿದರು.
ಪ್ರಧಾನಿ ಮೋದಿ ಅವರು ಬರುತ್ತಿದ್ದಂತೆ ಮತಗಟ್ಟೆ ಬಳಿ ನೆರದಿದ್ದ ಜನರು ಮೋದಿ ಮೋದಿ ಅಂತ ಕೂಗಲು ಆರಂಭಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಮತದಾನ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿ. ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕು.
ಮತದಾನ ಅನ್ನೋದು ಸಾಮಾನ್ಯ ದಾನ ಅಲ್ಲ, ಶ್ರೇಷ್ಠ ದಾನಗಳಲ್ಲಿ ಒಂದು ಎಂದು ಹೇಳಿದರು.
ಮತದಾರರ ಸಕ್ರಿಯ ಭಾಗಿತ್ವ ಚುನಾವಣೆಯನ್ನು ಮತ್ತಷ್ಟು ರೋಮಾಂಚನಗೊಳಿಸುತ್ತೆ. ಮತದಾನದ ವೇಳೆ ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ.
ಬಿಸಿಲಿನ ತಾಪ ಹೆಚ್ಚಿದ್ದು ಮತದಾರರು ಹೆಚ್ಚು ನೀರು ಕುಡಿದು ದಣಿವಾರಿಸಿಕೊಳ್ಳಿ ಎಂದು ಪ್ರಧಾನಿ ನುಡಿದರು.
ಮಾಧ್ಯಮ ಪ್ರತಿನಿಧಿಗಳು ಹಗಲು-ರಾತ್ರಿ ಎನ್ನದೆ ಸುದ್ದಿ ಪ್ರಸಾರ ಮಾಡುತ್ತೀರಿ. ಬಿಸಿಲು ಜಾಸ್ತಿ ಇದೆ, ನಿಮ್ಮ ಆರೋಗ್ಯದ ಬಗ್ಗೆ ಲಕ್ಷ ವಹಿಸಿ. ನೀರು ಜಾಸ್ತಿ ಕುಡಿಯಿರಿ ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು